ನವದೆಹಲಿ,:ಜಾರಿ ನಿದೇರ್ಶನಾಲಯ(ಜಾರಿ) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 15ರವರೆಗೆ ವಿಸ್ತರಣೆಯಾಗಿದೆ.
ಇಂದು ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಇ.ಡಿ.ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಅಜಯ್ಕುಮಾರ್ ಕುಹರ್ ಅವರು ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಡಿಕೆಶಿ ಅವರಿಗೆ ಜಾಮೀನು ನೀಡುವ ಕುರಿತು, ಇಡಿ ಪರ ವಾದ ಮಂಡಿಸಿದ ವಕೀಲ ನಾಗರಾಜ್, “ನ್ಯಾಯಾಂಗ ಬಂಧನದ ವೇಳೆ ಡಿಕೆಶಿ ವಿಚಾರಣೆಗೆ ಸಹಕಾರ ನೀಡಿಲ್ಲ. ಅನಾರೋಗ್ಯದ ನೆಪವೊಡ್ಡಿ ಪದೇ ಪದೇ ಆಸ್ಪತ್ರೆ ಸೇರಿದ್ದರು. ಪರಿಣಾಮ ಸಂಪೂರ್ಣ ವಿಚಾರಣೆ ಸಾಧ್ಯವಾಗಿಲ್ಲ. ಹೀಗಾಗಿ ಅವರನ್ನು ಮತ್ತಷ್ಟು ದಿನ ನ್ಯಾಯಾಂಗ ಬಂಧನಕ್ಕೆ ಒಪಡಿಸಬೇಕು” ಎಂದು ಮನವಿ ಮಾಡಿಕೊಂಡರು.
ಬಂಧನದ ವೇಳೆ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಿರುವ ನ್ಯಾಯಾಲಯ, ಮುಂದಿನ ಎರಡು ವಾರಗಳ ಕಾಲ ಡಿಕೆಶಿ ಜೈಲಿನಲ್ಲೇ ಕಳೆಯುವಂತಹ ತೀರ್ಪು ನೀಡಿದೆ.ಜಾಮೀನು ಕೋರಿ ಹೈಕೋರ್ಟ್ಗೆ ಮನವಿ ಮಾಡಿದ್ದರೂ ಅದರ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…