Featured

ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್ – ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ – vishwanews24

ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್ – ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್

ಬೆಂಗಳೂರು : ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದ್ದು, ದಲಿತ ಪರಮೇಶ್ವರ್ ಅವರನ್ನು ಮಾತ್ರ ಡಿಸಿಎಂ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ. ಇನ್ನುಳಿಂದತೆ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಡಿ.ಕೆ.ಶಿವಕುಮಾರ್​ -ಸಿಎಂ, ಡಾ.ಜಿ.ಪರಮೇಶ್ವರ್-ಡಿಸಿಎಂ, ಸತೀಶ್​​ ಜಾರಕಿಹೊಳಿ, ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ್​​ ಖರ್ಗೆ, ಕೃಷ್ಣ ಭೈರೇಗೌಡ, ಯು.ಟಿ.ಖಾದರ್​, ಡಾ.ಯತೀಂದ್ರ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್​, ಶರಣಪ್ರಕಾಶ್ ಪಾಟೀಲ್ ಹೆಸರು ಮೊದಲ ಪಟ್ಟಿಯಲ್ಲಿ​ದ್ದಾರೆ. ಇನ್ನು ಮೊದಲ ಪಟ್ಟಿಯಲ್ಲಿ ಹಲವು ಘಟಾನುಘಟಿ ನಾಯಕರಿಗೆ ಸ್ಥಾನ ಸಿಕ್ಕಿಲ್ಲ.

ಒಕ್ಕಲಿಗರ ಕೋಟಾದಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಮೂವರಿಗೆ ಸ್ಥಾನ ನೀಡಲಾಗಿದ್ದರೆ, ಲಿಂಗಾಯತ ಕೋಟಾದಲ್ಲಿ ಮೂವರು, ದಲಿತ ಕೋಟಾದಡಿ ಪರಮೇಶ್ವರ್ ಸೇರಿ ಮೂವರು, ಕುರುಬ ಸಮುದಾಯದಡಿ ಇಬ್ಬರಿಗೆ ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ. ಇನ್ನು ಎಸ್​​ಟಿ, ಮುಸ್ಲಿಮ್, ಕ್ರಿಶ್ಚಿಯನ್​​ ಕೋಟಾದಡಿ ತಲಾ ಒಬ್ಬರಿಗೆ ಸ್ಥಾನ ನೀಡಲಾಗಿದೆ.

Vishwa News 24

Recent Posts

ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಆರಂಭ – vishwanews24

ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಆರಂಭ ಮಂಗಳೂರು : ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗದ ನಿಮಿತ್ತ ರೈಲುಗಳಲ್ಲಿ ಉಂಟಾಗಿರುವ…

3 minutes ago

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ -vishwanews24

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ ಬೆಂಗಳೂರು : ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಖಚಿತವಾದ…

2 hours ago

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು – vishwanews24

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…

1 day ago

BREAKING NEWS: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ – vishwanews24

BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…

1 day ago

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  – vishwanews24

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  ಮುಂಬೈ: ಮುಂಬರುವ ಮುಂಗಾರು…

1 day ago

ಮಂಗಳೂರು: ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಯುಟಿ ಖಾದರ್ – vishwanews24

ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…

1 day ago