Featured

ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್ – ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ – vishwanews24

ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್ – ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್

ಬೆಂಗಳೂರು : ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದ್ದು, ದಲಿತ ಪರಮೇಶ್ವರ್ ಅವರನ್ನು ಮಾತ್ರ ಡಿಸಿಎಂ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ. ಇನ್ನುಳಿಂದತೆ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಡಿ.ಕೆ.ಶಿವಕುಮಾರ್​ -ಸಿಎಂ, ಡಾ.ಜಿ.ಪರಮೇಶ್ವರ್-ಡಿಸಿಎಂ, ಸತೀಶ್​​ ಜಾರಕಿಹೊಳಿ, ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ್​​ ಖರ್ಗೆ, ಕೃಷ್ಣ ಭೈರೇಗೌಡ, ಯು.ಟಿ.ಖಾದರ್​, ಡಾ.ಯತೀಂದ್ರ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್​, ಶರಣಪ್ರಕಾಶ್ ಪಾಟೀಲ್ ಹೆಸರು ಮೊದಲ ಪಟ್ಟಿಯಲ್ಲಿ​ದ್ದಾರೆ. ಇನ್ನು ಮೊದಲ ಪಟ್ಟಿಯಲ್ಲಿ ಹಲವು ಘಟಾನುಘಟಿ ನಾಯಕರಿಗೆ ಸ್ಥಾನ ಸಿಕ್ಕಿಲ್ಲ.

ಒಕ್ಕಲಿಗರ ಕೋಟಾದಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಮೂವರಿಗೆ ಸ್ಥಾನ ನೀಡಲಾಗಿದ್ದರೆ, ಲಿಂಗಾಯತ ಕೋಟಾದಲ್ಲಿ ಮೂವರು, ದಲಿತ ಕೋಟಾದಡಿ ಪರಮೇಶ್ವರ್ ಸೇರಿ ಮೂವರು, ಕುರುಬ ಸಮುದಾಯದಡಿ ಇಬ್ಬರಿಗೆ ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ. ಇನ್ನು ಎಸ್​​ಟಿ, ಮುಸ್ಲಿಮ್, ಕ್ರಿಶ್ಚಿಯನ್​​ ಕೋಟಾದಡಿ ತಲಾ ಒಬ್ಬರಿಗೆ ಸ್ಥಾನ ನೀಡಲಾಗಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

16 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

17 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

18 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

18 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

19 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

19 hours ago