ಬೆಂಗಳೂರು: ಪಿಎಸ್ ಐ ನೇಮಕ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಇರುವ ಫೋಟೋ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
ಸರಣಿ ಟ್ವೀಟ್ ಮೂಲಕ ಶಾಸಕ ಪ್ರಿಯಾಂಕ ಖರ್ಗೆ ಹಾಗೂ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆರೋಪ ನಡೆಸಿದೆ.
ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ. ಆದರೆ ಇಲ್ಲಿ ನೋಡಿ! ಈ ಚಿತ್ರ ಏನು ಹೇಳುತ್ತದೆ? ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ! ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ ಎಂದು ಪ್ರಶ್ನಿಸಿದೆ.
ಪಿಎಸ್ಐ ನೇಮಕ ಹಗರಣ ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ. ಅಧಿಕಾರದಲ್ಲಿ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ!
ಚಿಕ್ಕಮಗಳೂರು: ಆನೆದಂತದಿಂದ ಚೆಸ್ ಆಟದ ಪಾನ್ ತಯಾರಿಸಿ ಮಾರಾಟಕ್ಕೆ ಯತ್ನ: ಆರೋಪಿ ಬಂಧನ
ಸಿಡಿ ವಿವಾದ, ಹಿಜಾಬ್ ಸಂಘರ್ಷ, 40% ಪರ್ಸೆಂಟ್ ಕಮಿಷನ್, ಹರ್ಷ ಕೊಲೆ, ಹುಬ್ಬಳ್ಳಿ ಗಲಭೆ, ಪಿಎಸ್ಐ ನೇಮಕ ಹಗರಣ. ಎಲ್ಲದಕ್ಕೂ ಸೂತ್ರಧಾರ ಒಬ್ಬರೇ. ಮಾನ್ಯ ಡಿಕೆ ಶಿವಕುಮಾರ್ ಅವರೇ.ನೀವೆಷ್ಟೇ ರಹಸ್ಯ ಕಾರ್ಯಚರಣೆ ನಡೆಸಿದರೂ ಸತ್ಯ ಒಂದಿಲ್ಲೊಂದು ದಿನ ಬಯಲಾಗಲೇಬೇಕಲ್ಲವೇ? ಎಂದು ಟೀಕಿಸಿದೆ.
ಪ್ರಿಯಾಂಕ ಖರ್ಗೆ ಅವರ ಜೊತೆ ನಾವಿದ್ದೇವೆ ಎಂದು ಕೆಪಿಸಿಸಿ ಭ್ರಷ್ಟಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇಕೆ ಎಂದು ಈಗ ಬಯಲಾಗುತ್ತಿದೆ. ಹಗರಣದ ನಿರ್ಮಾಣ, ನಿರ್ದೇಶನ, ಚಿತ್ರಕತೆ, ಸಂಭಾಷಣೆ ಎಲ್ಲವೂ ಸಿದ್ಧವಾಗಿದ್ದು ಕೆಪಿಸಿಸಿ ಕಚೇರಿಯಲ್ಲೇ ಎಂದು ಬಿಜೆಪಿ ಆರೋಪಿಸಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…