ಬೆಂಗಳೂರು:ಕೇಂದ್ರ ಬಿಜೆಪಿ ಸರ್ಕಾರ ಪಿತೂರಿ ಮಾಡಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದೆ. ಈ ಸಂದರ್ಭದಲ್ಲಿ ಅವರ ತಾಯಿಯ ನೋವು ಹಾಗೂ ಕಣ್ಣೀರ ಶಾಪ ಬಿಜೆಪಿಯನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ಗೌರಮ್ಮ ಅವರಿಗೆ ಸಾಂತ್ವಾನ ಹೇಳಿದ ಕುಮಾರಸ್ವಾಮಿ, ‘ಯಾವುದಕ್ಕೂ ಹೆದರಬೇಡಿ, ಈ ಎಲ್ಲ ಸಂಕಷ್ಟಗಳನ್ನು ಎದುರಿಸಿ ಶಿವಕುಮಾರ್ ಅವರು ಹೊರ ಬರುತ್ತಾರೆ. ಬಿಜೆಪಿಯ ಈ ಕುತಂತ್ರ ಕೇವಲ ಎರಡು ದಿನ. ನಾವೆಲ್ಲರು ನಿಮ್ಮ ಜತೆ ಇದ್ದೇವೆ. ಹೆಚ್ಚು ಚಿಂತಿಸಬೇಡಿ. ಆರೋಗ್ಯದ ಕಡೆ ಗಮನಹರಿಸಿ ಎಂದು ಸಮಾಧಾನ ಮಾಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ, ಐಟಿ ಅಧಿಕಾರಿಗಳು ಬಿಜೆಪಿಯ ಕೈಕೆಳಗೆ ಕೆಲಸ ಮಾಡುತ್ತಿದ್ದಾರೆ, ಬಿಜೆಪಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಗುಜರಾತ್ ರಾಜ್ಯಸಭಾ ಚುನಾವಣೆಯ ವೇಳೆ ಪಕ್ಷವನ್ನು ಉಳಿಸಿಕೊಳ್ಳುವ ಸಲುವಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿ ಶಾಸಕರನ್ನು ರಕ್ಷಣೆ ಮಾಡಿದ್ದರು. ಆ ವೇಳೆ ಡಿಕೆ ಶಿವಕುಮಾರ್ ಅವರಿಗೆ ಫೋನ್ ಕರೆ ಮಾಡಿದ್ದ ಸಂಗತಿ ಎಲ್ಲರಿಗೂ ತಿಳಿದಿದೆ. ಆದರೆ ಅವರು ಪಕ್ಷದ ಕಾರ್ಯವನ್ನು ಮಾಡಿದ್ದರಿಂದ ಬಿಜೆಪಿಗೆ ರಾಜ್ಯಸಭೆಯ ಚುನಾವಣೆಯಲ್ಲಿ ಭಾರೀ ಹಿನ್ನಡೆಯಾಗಿತ್ತು. ಅದಕ್ಕಾಗಿ ಅವರನ್ನುನೇರವಾಗಿ ಗುರಿಯಾಗಿಸಿಕೊಂಡು ಅವರನ್ನು ಬಂಧಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಇಡಿ, ಐಟಿ ಸಂಸ್ಥೆಗಳನ್ನು ಉಪಯೋಗಿಸಿ ದುರ್ಬಳಕೆ ಮಾಡುತ್ತಿದೆ ಎಂದರು.
ಡಿಕೆ ಶಿವಕುಮಾರ್ ನಾಲ್ಕು ದಿನಗಳ ಕಾಲ ವಿಚಾರಣೆಗೆ ಹಾಜರಾಗಿ ಅವರ ಪ್ರಶ್ನೆಗೆ ಉತ್ತರಿಸಿದರೂ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ ಅವಕಾಶ ಇಲ್ಲ. ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗಿದೆ. ಆದರೂ ಅವರನ್ನು ಬಂಧಿಸಿರುವುದು ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ಸಾಕ್ಷಿ.
ಈ ತಾಯಿಯ ನೋವು ಹಾಗೂ ಕಣ್ಣೀರ ಶಾಪ ಬಿಜೆಪಿ ಕುತಂತ್ರಕ್ಕೆ ಶಾಪವಾಗಲಿದೆ. ಅವರನ್ನು ಸರ್ವನಾಶ ಮಾಡಲಿದೆ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ಕಾಲಚಕ್ರ ಬದಲಾಗಲಿದೆ. ನಾಳೆ ಇದೇ ಪರಿಸ್ಥಿತಿ ಬಿಜೆಪಿ ನಾಯಕರಿಗೆ ಬಂದರೆ ಆಶ್ಚರ್ಯ ಇಲ್ಲ’ ಎಂದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…