Featured

ಡಿಕೆ ಶಿ ತಾಯಿಯ ನೋವು ಹಾಗೂ ಕಣ್ಣೀರು ಬಿಜೆಪಿ ಕುತಂತ್ರಕ್ಕೆ ಶಾಪವಾಗಲಿದೆ ಅವರನ್ನು ಸರ್ವನಾಶ ಮಾಡಲಿದೆ : ಕುಮಾರಸ್ವಾಮಿ -Vishwanews24

ಬೆಂಗಳೂರು:ಕೇಂದ್ರ ಬಿಜೆಪಿ ಸರ್ಕಾರ ಪಿತೂರಿ ಮಾಡಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದೆ. ಈ ಸಂದರ್ಭದಲ್ಲಿ ಅವರ ತಾಯಿಯ ನೋವು ಹಾಗೂ ಕಣ್ಣೀರ ಶಾಪ ಬಿಜೆಪಿಯನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಗೌರಮ್ಮ ಅವರಿಗೆ ಸಾಂತ್ವಾನ ಹೇಳಿದ ಕುಮಾರಸ್ವಾಮಿ, ‘ಯಾವುದಕ್ಕೂ ಹೆದರಬೇಡಿ, ಈ ಎಲ್ಲ ಸಂಕಷ್ಟಗಳನ್ನು ಎದುರಿಸಿ ಶಿವಕುಮಾರ್ ಅವರು ಹೊರ ಬರುತ್ತಾರೆ. ಬಿಜೆಪಿಯ ಈ ಕುತಂತ್ರ ಕೇವಲ ಎರಡು ದಿನ. ನಾವೆಲ್ಲರು ನಿಮ್ಮ ಜತೆ ಇದ್ದೇವೆ. ಹೆಚ್ಚು ಚಿಂತಿಸಬೇಡಿ. ಆರೋಗ್ಯದ ಕಡೆ ಗಮನಹರಿಸಿ ಎಂದು ಸಮಾಧಾನ ಮಾಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ, ಐಟಿ ಅಧಿಕಾರಿಗಳು ಬಿಜೆಪಿಯ ಕೈಕೆಳಗೆ ಕೆಲಸ ಮಾಡುತ್ತಿದ್ದಾರೆ, ಬಿಜೆಪಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಗುಜರಾತ್ ರಾಜ್ಯಸಭಾ ಚುನಾವಣೆಯ ವೇಳೆ ಪಕ್ಷವನ್ನು ಉಳಿಸಿಕೊಳ್ಳುವ ಸಲುವಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿ ಶಾಸಕರನ್ನು ರಕ್ಷಣೆ ಮಾಡಿದ್ದರು. ಆ ವೇಳೆ ಡಿಕೆ ಶಿವಕುಮಾರ್ ಅವರಿಗೆ ಫೋನ್ ಕರೆ ಮಾಡಿದ್ದ ಸಂಗತಿ ಎಲ್ಲರಿಗೂ ತಿಳಿದಿದೆ. ಆದರೆ ಅವರು ಪಕ್ಷದ ಕಾರ್ಯವನ್ನು ಮಾಡಿದ್ದರಿಂದ ಬಿಜೆಪಿಗೆ ರಾಜ್ಯಸಭೆಯ ಚುನಾವಣೆಯಲ್ಲಿ ಭಾರೀ ಹಿನ್ನಡೆಯಾಗಿತ್ತು. ಅದಕ್ಕಾಗಿ ಅವರನ್ನುನೇರವಾಗಿ ಗುರಿಯಾಗಿಸಿಕೊಂಡು ಅವರನ್ನು ಬಂಧಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಇಡಿ, ಐಟಿ ಸಂಸ್ಥೆಗಳನ್ನು ಉಪಯೋಗಿಸಿ ದುರ್ಬಳಕೆ ಮಾಡುತ್ತಿದೆ ಎಂದರು.

ಡಿಕೆ ಶಿವಕುಮಾರ್ ನಾಲ್ಕು ದಿನಗಳ ಕಾಲ ವಿಚಾರಣೆಗೆ ಹಾಜರಾಗಿ ಅವರ ಪ್ರಶ್ನೆಗೆ ಉತ್ತರಿಸಿದರೂ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ ಅವಕಾಶ ಇಲ್ಲ. ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗಿದೆ. ಆದರೂ ಅವರನ್ನು ಬಂಧಿಸಿರುವುದು ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ಸಾಕ್ಷಿ.

ಈ ತಾಯಿಯ ನೋವು ಹಾಗೂ ಕಣ್ಣೀರ ಶಾಪ ಬಿಜೆಪಿ ಕುತಂತ್ರಕ್ಕೆ ಶಾಪವಾಗಲಿದೆ. ಅವರನ್ನು ಸರ್ವನಾಶ ಮಾಡಲಿದೆ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ಕಾಲಚಕ್ರ ಬದಲಾಗಲಿದೆ. ನಾಳೆ ಇದೇ ಪರಿಸ್ಥಿತಿ ಬಿಜೆಪಿ ನಾಯಕರಿಗೆ ಬಂದರೆ ಆಶ್ಚರ್ಯ ಇಲ್ಲ’ ಎಂದರು.

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

41 minutes ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 day ago