ಬೆಂಗಳೂರು:ಕೇಂದ್ರ ಬಿಜೆಪಿ ಸರ್ಕಾರ ಪಿತೂರಿ ಮಾಡಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದೆ. ಈ ಸಂದರ್ಭದಲ್ಲಿ ಅವರ ತಾಯಿಯ ನೋವು ಹಾಗೂ ಕಣ್ಣೀರ ಶಾಪ ಬಿಜೆಪಿಯನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ಗೌರಮ್ಮ ಅವರಿಗೆ ಸಾಂತ್ವಾನ ಹೇಳಿದ ಕುಮಾರಸ್ವಾಮಿ, ‘ಯಾವುದಕ್ಕೂ ಹೆದರಬೇಡಿ, ಈ ಎಲ್ಲ ಸಂಕಷ್ಟಗಳನ್ನು ಎದುರಿಸಿ ಶಿವಕುಮಾರ್ ಅವರು ಹೊರ ಬರುತ್ತಾರೆ. ಬಿಜೆಪಿಯ ಈ ಕುತಂತ್ರ ಕೇವಲ ಎರಡು ದಿನ. ನಾವೆಲ್ಲರು ನಿಮ್ಮ ಜತೆ ಇದ್ದೇವೆ. ಹೆಚ್ಚು ಚಿಂತಿಸಬೇಡಿ. ಆರೋಗ್ಯದ ಕಡೆ ಗಮನಹರಿಸಿ ಎಂದು ಸಮಾಧಾನ ಮಾಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ, ಐಟಿ ಅಧಿಕಾರಿಗಳು ಬಿಜೆಪಿಯ ಕೈಕೆಳಗೆ ಕೆಲಸ ಮಾಡುತ್ತಿದ್ದಾರೆ, ಬಿಜೆಪಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಗುಜರಾತ್ ರಾಜ್ಯಸಭಾ ಚುನಾವಣೆಯ ವೇಳೆ ಪಕ್ಷವನ್ನು ಉಳಿಸಿಕೊಳ್ಳುವ ಸಲುವಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿ ಶಾಸಕರನ್ನು ರಕ್ಷಣೆ ಮಾಡಿದ್ದರು. ಆ ವೇಳೆ ಡಿಕೆ ಶಿವಕುಮಾರ್ ಅವರಿಗೆ ಫೋನ್ ಕರೆ ಮಾಡಿದ್ದ ಸಂಗತಿ ಎಲ್ಲರಿಗೂ ತಿಳಿದಿದೆ. ಆದರೆ ಅವರು ಪಕ್ಷದ ಕಾರ್ಯವನ್ನು ಮಾಡಿದ್ದರಿಂದ ಬಿಜೆಪಿಗೆ ರಾಜ್ಯಸಭೆಯ ಚುನಾವಣೆಯಲ್ಲಿ ಭಾರೀ ಹಿನ್ನಡೆಯಾಗಿತ್ತು. ಅದಕ್ಕಾಗಿ ಅವರನ್ನುನೇರವಾಗಿ ಗುರಿಯಾಗಿಸಿಕೊಂಡು ಅವರನ್ನು ಬಂಧಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಇಡಿ, ಐಟಿ ಸಂಸ್ಥೆಗಳನ್ನು ಉಪಯೋಗಿಸಿ ದುರ್ಬಳಕೆ ಮಾಡುತ್ತಿದೆ ಎಂದರು.
ಡಿಕೆ ಶಿವಕುಮಾರ್ ನಾಲ್ಕು ದಿನಗಳ ಕಾಲ ವಿಚಾರಣೆಗೆ ಹಾಜರಾಗಿ ಅವರ ಪ್ರಶ್ನೆಗೆ ಉತ್ತರಿಸಿದರೂ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ ಅವಕಾಶ ಇಲ್ಲ. ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗಿದೆ. ಆದರೂ ಅವರನ್ನು ಬಂಧಿಸಿರುವುದು ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ಸಾಕ್ಷಿ.
ಈ ತಾಯಿಯ ನೋವು ಹಾಗೂ ಕಣ್ಣೀರ ಶಾಪ ಬಿಜೆಪಿ ಕುತಂತ್ರಕ್ಕೆ ಶಾಪವಾಗಲಿದೆ. ಅವರನ್ನು ಸರ್ವನಾಶ ಮಾಡಲಿದೆ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ಕಾಲಚಕ್ರ ಬದಲಾಗಲಿದೆ. ನಾಳೆ ಇದೇ ಪರಿಸ್ಥಿತಿ ಬಿಜೆಪಿ ನಾಯಕರಿಗೆ ಬಂದರೆ ಆಶ್ಚರ್ಯ ಇಲ್ಲ’ ಎಂದರು.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…