Featured

ಡಿಕೆ ಶಿ ಪರ ಘೋಷಣೆ – ಜಮೀರ್ ಫೋಟೋ ಪ್ರದರ್ಶನ ;ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದ ಸಿದ್ದರಾಮಯ್ಯ – VIshwanews24

ಡಿಕೆ ಶಿ ಪರ ಘೋಷಣೆ – ಜಮೀರ್ ಫೋಟೋ ಪ್ರದರ್ಶನ ;ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದ ಸಿದ್ದರಾಮಯ್ಯ – VIshwanews24

ಬೆಂಗಳೂರು:  ಮಂಗಳವಾರ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಬೆಂಬಲಿಗರು, ಶಾಂತಿನಗರ ಶಾಸಕ ಎನ್‌ಎ ಹ್ಯಾರೀಸ್ ಅವರನ್ನು ಕಡೆಗಣಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಯಾಗಿದೆ. ಪದೇಪದೆ ಡಿಕೆ ಡಿಕೆ ಎಂದು ಕೆಲವರು ಘೋಷಣೆ ಕೂಗುತ್ತಿದ್ದರು. ಇನ್ನು ಕೆಲವರು ಜಮೀರ್ ಫೋಟೋ ಹಿಡಿದು ಘೋಷಣೆ ಹಾಕುತ್ತಿದ್ದರು. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ.

ಬಳಿಕ ವೇದಿಕೆಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಮಾತನಾಡಬೇಕಾದರೆ ನೀವು ಕೂಗುತ್ತೀರಿ. ನೀವು ಕಾಂಗ್ರೆಸ್ ದ್ರೋಹಿಗಳೆಂದು ಡಿಕೆ ಶಿವಕುಮಾರ್ ಗರಂ ಆದರು.

ಇನ್ನೂ ಶಾಸಕ ಹ್ಯಾರಿಸ್ ಮಾತನಾಡಿ ಖರ್ಗೆ ಮತ್ತು ಶಿವಕುಮಾರ್ ಅವರನ್ನು ಹೊಗಳಿ , ಜಮೀರ್ ವಿರುದ್ಧ ಪರೋಕ್ಷವಾಗಿ ಟೀಕಿಸಿದರು. ಕಾರ್ಯಕ್ರಮಕ್ಕೆ ಸಿಎಂ ಇಬ್ರಾಹಿಂ ಕೂಡ ಆಗಮಿಸಿರಲಿಲ್ಲ. ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಎಂ ಇಬ್ರಾಹಿಂ, ಅವರೆಲ್ಲಾ ಧೀಮಂತ ನಾಯಕರು, ಅವರ ಜೊತೆ ಸೇರುವುದು ಸರಿಯಲ್ಲ ಎಂದು ನಾನು ಕಾರ್ಯಕ್ರಮಕ್ಕೆ ಬರಲಿಲ್ಲ ಎಂದು ವ್ಯಂಗ್ಯವಾಗಿ ತಿಳಿಸಿದ್ದಾರೆ.

 

Vishwa News 24

Recent Posts

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

10 minutes ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

20 minutes ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

26 minutes ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

29 minutes ago

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ – vishwanews24

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…

47 minutes ago

ನವೆಂಬರ್ ಮೊದಲ ವಾರದಲ್ಲಿ ಉಡುಪಿ ನಗರಕ್ಕೆ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ – vishwanews24

ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ…

1 hour ago