Featured

ಡಿಕೆ ಶಿ ವಿರುದ್ಧದ​ ಸಿಬಿಐ ಕೇಸ್ ವಾಪಸ್ –  ಕಳ್ಳ ಯಾವತ್ತಿದ್ದರೂ ಕಳ್ಳನೇ : ಕೆ.ಎಸ್ ಈಶ್ವರಪ್ಪ – vishwanews24

ಡಿಕೆ ಶಿ ವಿರುದ್ಧದ​ ಸಿಬಿಐ ಕೇಸ್ ವಾಪಸ್ –  ಕಳ್ಳ ಯಾವತ್ತಿದ್ದರೂ ಕಳ್ಳನೇ : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಸಿಬಿಐ ತನಿಖೆಗೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪು ಚುಕ್ಕೆ. ಡಿಕೆಶಿ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ  ಕಿಡಿ ಕಾರಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಗುರುವಾರ (ನ.23) ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಈಶ್ವರಪ್ಪ ಮಾತನಾಡಿದ್ದಾರೆ.

ಡಿಕೆಶಿ ವಿರುದ್ಧದ ಸಿಬಿಐ ಕೇಸನ್ನು ಸಚಿವ ಸಂಪುಟ ವಾಪಸ್ ತಗೊಂಡಿರೋದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ, 135 ಸೀಟ್ ಬಂದಿದೆ ಅಂತ ಮಾಡಬಾರದ್ದನ್ನೆಲ್ಲಾ ಮಾಡ್ತಿದ್ದಾರೆ. 23 ಕೋಟಿ ಇದ್ದ ವರಮಾನ 163 ಕೋಟಿಗೆ ಹೆಚ್ಚಳವಾಗಿದೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದರು. ಡಿಕೆಶಿ ನ್ಯಾಯಾಲಯಕ್ಕೆ ಹೋದರೂ ಅಲ್ಲಿ ತಿರಸ್ಕಾರವಾಯ್ತು. ಇದು ಇಡೀ ದೇಶಕ್ಕೆ ಗೊತ್ತು. ಸಿಬಿಐ ತನಿಖೆ ಅಂತಿಮ ಹಂತಕ್ಕೆ ಬಂದಿರುವಾಗ ಈ ರೀತಿ ಮಾಡೋದು ಸರಿಯಲ್ಲ. ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ, ಕೇಡಿ ಸಿದ್ದು ಅವರ ದರೋಡೆಕೋರರ ತಂಡ ದುರುಪಯೋಗ ಮಾಡಿಕೊಂಡಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಸಚಿವ ಕೆ.ಜೆ ಜಾರ್ಜ್ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಕೊಟ್ಟು ನಂತರ ಸಚಿವ ಸಂಪುಟಕ್ಕೆ ಸೇರಿದರು. ನನ್ನ ಮೇಲೆ ಆಪಾದನೆ ಬಂತು ನಾನು ರಾಜೀನಾಮೆ ಕೊಟ್ಟೆ. ಸುಪ್ರೀಂ ಕೋರ್ಟ್ ತಜ್ಞರು ಹೇಳ್ತಿದ್ದಾರೆ ಸಿಬಿಐಗೆ ತನಿಖೆಗೆ ವಹಿಸಲು ಅನುಮತಿ ಇದೆ, ಆದ್ರೆ ಹಿಂಪಡೆಯಲು ಅನುಮತಿ ಬೇಕಿಲ್ಲ. ಸಿದ್ದರಾಮಯ್ಯ ಅವರಿಗೆ ಈ ವಿಷಯ ಗೊತ್ತಿಲ್ವಾ. ಡಿಕೆಶಿ ಕೇಸನ್ನ ವಾಪಸ್ ಪಡೆಯಬೇಕು ಅಂತಾ ಸಚಿವ ಸಂಪುಟ ಸಭೆಗೆ ಹೋಗಿಲ್ಲ. ಇದು ದೇಶದಲ್ಲೇ ದೊಡ್ಡ ಅಪರಾಧ ಎಂದು ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago