ಬೆಂಗಳೂರು: ಡಿಕೆ ಶಿವಕುಮಾರ್ ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, ಈಗಲೂ ಹೇಳಿದ್ದಾರೆ.. ಮುಂದೆಯೂ ಹೇಳುತ್ತಾರೆ. ಪಕ್ಷದ ಶಿಸ್ತನ್ನ ಪಾಲಿಸಿದ್ದಾರೆ, ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ. ಡಿ.ಕೆ ಶಿವಕುಮಾರ್ ರದ್ದು ಅಸಹಾಯಕತೆ ಅಲ್ಲ. ಪಕ್ಷಕ್ಕೆ ಗೌರವ ಕೊಡೋದು, ನಾಯಕತ್ವಕ್ಕೆ ಗೌರವ ಕೊಡೋದು. ಪಕ್ಷದ ಅಧ್ಯಕ್ಷರಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ನನಗೂ ಅವರು ಸಿಎಂ ಆಗಬೇಕು ಎಂಬ ಆಸೆ ಇದೆ. ಯಾವಾಗ ಏನು ಎಂಬುದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಪಾಡಬೇಕು. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಚೆನ್ನಾಗಿದ್ದಾರೆ. ಇವತ್ತೂ ಚೆನ್ನಾಗಿದ್ದಾರೆ, ನಾಳೆಯೂ ಚೆನ್ನಾಗಿರ್ತಾರೆ. ನಮ್ಮ ಹಣೆಬರಹದಲ್ಲಿ ಬರೆದಿರಬೇಕು. ನೀನು ಸಿಎಂ, ಶಾಸಕ ಆಗಬೇಕೆಂದು ಇರಬೇಕು ಎಂದು ನುಡಿದರು
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…