ಬೆಂಗಳೂರು: ಅಕ್ರಮ ಹಣ ಸಂಗ್ರಹ ಮತ್ತು ವಿನಿಮಯ ಹಾಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಡಿ ಕೆ ಸಹೋದರರಿಗೆ ಇನ್ನಷ್ಟು ಕಗ್ಗಂಟಾಗುವ ಲಕ್ಷಣ ಕಾಣುತ್ತಿದೆ. ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಡಿ ಕೆ ಶಿವಕುಮಾರ್, ಅವರ ಸೋದರ ಡಿ ಕೆ ಸುರೇಶ್ ಮತ್ತು ಅವರ ಮಾಜಿ ಆಪ್ತ ಸಹಾಯಕರು ಅಮಾನ್ಯತೆಗೊಂಡ ನೋಟುಗಳನ್ನು ಅಕ್ರಮವಾಗಿ ವಿನಿಮಯ ಮಾಡಿದ ಸಂಬಂಧ ಇದೀಗ ಬಂಧನ ಭೀತಿ ಎದುರಿಸುತ್ತಿದ್ದಾರೆ.ನಿನ್ನೆ ಸಿಬಿಐ ವಿಶೇಷ ನ್ಯಾಯಾಲಯ ಇವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ನೆಲಮಂಗಲ ತಾಲ್ಲೂಕಿನ ಟಿ ಬೇಗೂರಿನ ಬಿ ಪದ್ಮನಾಭಯ್ಯ ಎಂಬುವವರು ಆರೋಪಿಗಳಾಗಿದ್ದು ಅವರು ಡಿ ಕೆ ಸುರೇಶ್ ಅವರ ಖಾಸಗಿ ಸಹಾಯಕರಾಗಿದ್ದರು.ರಾಮನಗರ ತಾಲ್ಲೂಕಿನ ವಿಜಯನಗರದ ಎಸ್ ಶೇಷಗಿರಿ ಎಂಬ ನಿವೃತ್ತ ಅಧಿಕಾರಿ ಡಿಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾಗ ಖಾಸಗಿ ಸಹಾಯಕರಾಗಿದ್ದರು. ಇವರು ಮತ್ತೊಬ್ಬ ಆರೋಪಿಯಾಗಿದ್ದಾರೆ.ಕೇಂದ್ರ ಸರ್ಕಾರ 500 ಮತ್ತು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಪಡಿಸಿದ ನಂತರದ ನವೆಂಬರ್ 2016ರ ಕೇಸು ಇದಾಗಿದೆ. ಕಳೆದ ಮೇ 31ರಂದು ಸಿಬಿಐ, ಸುರೇಶ್ ಅವರ ಆಪ್ತ ಸಹಾಯಕನ ಮನೆ ಮೇಲೆ ದಾಳಿ ನಡೆಸಿತ್ತು. ಸುಮಾರು 10 ಲಕ್ಷಕ್ಕೂ ಅಧಿಕ ಚಲಾವಣೆ ರದ್ದುಗೊಂಡ ನೋಟುಗಳ ಅಕ್ರಮ ವಿನಿಮಯ ಮಾಡಿದ್ದರ ಆರೋಪದ ಬಗ್ಗೆ ಬೆಂಗಳೂರು, ಕನಕಪುರ ಮತ್ತು ರಾಮನಗರದ 5 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.ಈ ದಾಳಿ ನಡೆದ ನಂತರ ಸಿಬಿಐ ಸಂಸ್ಥೆಯನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಡಿ ಕೆ ಸಹೋದರರು ಆರೋಪಿಸಿದ್ದರು. ಕೇಂದ್ರ ಸರ್ಕಾರದ ತಂತ್ರಗಳು ಮತ್ತು ತೋಳ್ಬಲ ಪ್ರದರ್ಶನ ಪ್ರಯೋಜನಕ್ಕೆ ಬರುವುದಿಲ್ಲ. ನಾವು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ದ ಎಂದು ಡಿ ಕೆ ಶಿವಕುಮಾರ್ ಹೇಳಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…