ಬೆಂಗಳೂರು: ಅಕ್ರಮ ಹಣ ಸಂಗ್ರಹ ಮತ್ತು ವಿನಿಮಯ ಹಾಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಡಿ ಕೆ ಸಹೋದರರಿಗೆ ಇನ್ನಷ್ಟು ಕಗ್ಗಂಟಾಗುವ ಲಕ್ಷಣ ಕಾಣುತ್ತಿದೆ. ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಡಿ ಕೆ ಶಿವಕುಮಾರ್, ಅವರ ಸೋದರ ಡಿ ಕೆ ಸುರೇಶ್ ಮತ್ತು ಅವರ ಮಾಜಿ ಆಪ್ತ ಸಹಾಯಕರು ಅಮಾನ್ಯತೆಗೊಂಡ ನೋಟುಗಳನ್ನು ಅಕ್ರಮವಾಗಿ ವಿನಿಮಯ ಮಾಡಿದ ಸಂಬಂಧ ಇದೀಗ ಬಂಧನ ಭೀತಿ ಎದುರಿಸುತ್ತಿದ್ದಾರೆ.ನಿನ್ನೆ ಸಿಬಿಐ ವಿಶೇಷ ನ್ಯಾಯಾಲಯ ಇವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ನೆಲಮಂಗಲ ತಾಲ್ಲೂಕಿನ ಟಿ ಬೇಗೂರಿನ ಬಿ ಪದ್ಮನಾಭಯ್ಯ ಎಂಬುವವರು ಆರೋಪಿಗಳಾಗಿದ್ದು ಅವರು ಡಿ ಕೆ ಸುರೇಶ್ ಅವರ ಖಾಸಗಿ ಸಹಾಯಕರಾಗಿದ್ದರು.ರಾಮನಗರ ತಾಲ್ಲೂಕಿನ ವಿಜಯನಗರದ ಎಸ್ ಶೇಷಗಿರಿ ಎಂಬ ನಿವೃತ್ತ ಅಧಿಕಾರಿ ಡಿಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾಗ ಖಾಸಗಿ ಸಹಾಯಕರಾಗಿದ್ದರು. ಇವರು ಮತ್ತೊಬ್ಬ ಆರೋಪಿಯಾಗಿದ್ದಾರೆ.ಕೇಂದ್ರ ಸರ್ಕಾರ 500 ಮತ್ತು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಪಡಿಸಿದ ನಂತರದ ನವೆಂಬರ್ 2016ರ ಕೇಸು ಇದಾಗಿದೆ. ಕಳೆದ ಮೇ 31ರಂದು ಸಿಬಿಐ, ಸುರೇಶ್ ಅವರ ಆಪ್ತ ಸಹಾಯಕನ ಮನೆ ಮೇಲೆ ದಾಳಿ ನಡೆಸಿತ್ತು. ಸುಮಾರು 10 ಲಕ್ಷಕ್ಕೂ ಅಧಿಕ ಚಲಾವಣೆ ರದ್ದುಗೊಂಡ ನೋಟುಗಳ ಅಕ್ರಮ ವಿನಿಮಯ ಮಾಡಿದ್ದರ ಆರೋಪದ ಬಗ್ಗೆ ಬೆಂಗಳೂರು, ಕನಕಪುರ ಮತ್ತು ರಾಮನಗರದ 5 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.ಈ ದಾಳಿ ನಡೆದ ನಂತರ ಸಿಬಿಐ ಸಂಸ್ಥೆಯನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಡಿ ಕೆ ಸಹೋದರರು ಆರೋಪಿಸಿದ್ದರು. ಕೇಂದ್ರ ಸರ್ಕಾರದ ತಂತ್ರಗಳು ಮತ್ತು ತೋಳ್ಬಲ ಪ್ರದರ್ಶನ ಪ್ರಯೋಜನಕ್ಕೆ ಬರುವುದಿಲ್ಲ. ನಾವು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ದ ಎಂದು ಡಿ ಕೆ ಶಿವಕುಮಾರ್ ಹೇಳಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…