ಬೆಂಗಳೂರು: ಅಕ್ರಮ ಹಣ ಸಂಗ್ರಹ ಮತ್ತು ವಿನಿಮಯ ಹಾಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಡಿ ಕೆ ಸಹೋದರರಿಗೆ ಇನ್ನಷ್ಟು ಕಗ್ಗಂಟಾಗುವ ಲಕ್ಷಣ ಕಾಣುತ್ತಿದೆ. ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಡಿ ಕೆ ಶಿವಕುಮಾರ್, ಅವರ ಸೋದರ ಡಿ ಕೆ ಸುರೇಶ್ ಮತ್ತು ಅವರ ಮಾಜಿ ಆಪ್ತ ಸಹಾಯಕರು ಅಮಾನ್ಯತೆಗೊಂಡ ನೋಟುಗಳನ್ನು ಅಕ್ರಮವಾಗಿ ವಿನಿಮಯ ಮಾಡಿದ ಸಂಬಂಧ ಇದೀಗ ಬಂಧನ ಭೀತಿ ಎದುರಿಸುತ್ತಿದ್ದಾರೆ.ನಿನ್ನೆ ಸಿಬಿಐ ವಿಶೇಷ ನ್ಯಾಯಾಲಯ ಇವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ನೆಲಮಂಗಲ ತಾಲ್ಲೂಕಿನ ಟಿ ಬೇಗೂರಿನ ಬಿ ಪದ್ಮನಾಭಯ್ಯ ಎಂಬುವವರು ಆರೋಪಿಗಳಾಗಿದ್ದು ಅವರು ಡಿ ಕೆ ಸುರೇಶ್ ಅವರ ಖಾಸಗಿ ಸಹಾಯಕರಾಗಿದ್ದರು.ರಾಮನಗರ ತಾಲ್ಲೂಕಿನ ವಿಜಯನಗರದ ಎಸ್ ಶೇಷಗಿರಿ ಎಂಬ ನಿವೃತ್ತ ಅಧಿಕಾರಿ ಡಿಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾಗ ಖಾಸಗಿ ಸಹಾಯಕರಾಗಿದ್ದರು. ಇವರು ಮತ್ತೊಬ್ಬ ಆರೋಪಿಯಾಗಿದ್ದಾರೆ.ಕೇಂದ್ರ ಸರ್ಕಾರ 500 ಮತ್ತು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಪಡಿಸಿದ ನಂತರದ ನವೆಂಬರ್ 2016ರ ಕೇಸು ಇದಾಗಿದೆ. ಕಳೆದ ಮೇ 31ರಂದು ಸಿಬಿಐ, ಸುರೇಶ್ ಅವರ ಆಪ್ತ ಸಹಾಯಕನ ಮನೆ ಮೇಲೆ ದಾಳಿ ನಡೆಸಿತ್ತು. ಸುಮಾರು 10 ಲಕ್ಷಕ್ಕೂ ಅಧಿಕ ಚಲಾವಣೆ ರದ್ದುಗೊಂಡ ನೋಟುಗಳ ಅಕ್ರಮ ವಿನಿಮಯ ಮಾಡಿದ್ದರ ಆರೋಪದ ಬಗ್ಗೆ ಬೆಂಗಳೂರು, ಕನಕಪುರ ಮತ್ತು ರಾಮನಗರದ 5 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.ಈ ದಾಳಿ ನಡೆದ ನಂತರ ಸಿಬಿಐ ಸಂಸ್ಥೆಯನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಡಿ ಕೆ ಸಹೋದರರು ಆರೋಪಿಸಿದ್ದರು. ಕೇಂದ್ರ ಸರ್ಕಾರದ ತಂತ್ರಗಳು ಮತ್ತು ತೋಳ್ಬಲ ಪ್ರದರ್ಶನ ಪ್ರಯೋಜನಕ್ಕೆ ಬರುವುದಿಲ್ಲ. ನಾವು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ದ ಎಂದು ಡಿ ಕೆ ಶಿವಕುಮಾರ್ ಹೇಳಿದ್ದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…