ಬೆಂಗಳೂರು: ‘ನಗರದಾದ್ಯಂತ ನಿತ್ಯ ಒಂದು ಗಂಟೆ ಉಚಿತವಾಗಿ ವೈ–ಫೈ ಸೇವೆ ಒದಗಿಸಲಾಗುತ್ತದೆ. ಎಸಿಟಿ ಕಂಪನಿಯು ಯಾವುದೇ ಶುಲ್ಕ ಪಡೆಯದೆಯೇ ಈ ಸೇವೆಯನ್ನು ಒದಗಿಸಲು ಮುಂದೆ ಬಂದಿದೆ’ ಎಂದು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಬುಧವಾರ ತಿಳಿಸಿದರು.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡಿಜಿಟಲ್ ಕರ್ನಾಟಕದ ಮೂಲಕ ಡಿಜಿಟಲ್ ಇಂಡಿಯಾದ ಕನಸು ಸಾಕಾರಗೊಳಿಸುವುದು ನಮ್ಮ ಗುರಿ. ಇದನ್ನು ಸಾಕಾರಗೊಳಿಸುವ ನಿಟ್ಟಿನ ಮೊದಲ ಹೆಜ್ಜೆಯಾಗಿ ನಗರದಲ್ಲಿ ಕ್ಷಿಪ್ರ ವೇಗದ ಇಂಟರ್ನೆಟ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಎಸಿಟಿ ಸಂಸ್ಥೆಯು ವೈ–ಫೈ ಗೋಪುರಗಳ ಜೊತೆ ಸಿಸಿಟಿವಿ ಕ್ಯಾಮರಾಗಳನ್ನೂ ಅಳವಡಿಸಲಿದೆ. ಈ ಯೋಜನೆಗೆ ಸಂಸ್ಥೆ ₹ 100 ಕೋಟಿ ವೆಚ್ಚಮಾಡಲಿದೆ. ಯೋಜನೆ ಪೂರ್ಣಗೊಳ್ಳಲು 9 ತಿಂಗಳು ಬೇಕು’ ಎಂದು ಸಚಿವರು ವಿವರಿಸಿದರು.
ಎಸಿಟಿ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಾಲ ಮಲ್ಲಾಡಿ, ‘ಬೆಂಗಳೂರನ್ನು ಡಿಜಿಟಲ್ ಸಿಟಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ದೊರೆತಿರುವ ಈ ಅವಕಾಶಕ್ಕೆ ಧನ್ಯವಾದ ಹೇಳುತ್ತೇವೆ. ಈ ಮೂಲಕ ನಗರದ ಜನ ಜೀವನದಲ್ಲಿ ಬದಲಾವಣೆ ತರುವ ಉದ್ದೇಶ ನಮ್ಮದು. ವೈ–ಫೈ ಗೋಪುರಗಳ ನಿರ್ವಹಣೆಗೆ ಬಿಬಿಎಂಪಿ ವತಿಯಿಂದ ವಿದ್ಯುತ್ಪೂರೈಸಬೇಕು. ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ’ ಎಂದುತಿಳಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…