ಬೆಂಗಳೂರು: ‘ನಗರದಾದ್ಯಂತ ನಿತ್ಯ ಒಂದು ಗಂಟೆ ಉಚಿತವಾಗಿ ವೈ–ಫೈ ಸೇವೆ ಒದಗಿಸಲಾಗುತ್ತದೆ. ಎಸಿಟಿ ಕಂಪನಿಯು ಯಾವುದೇ ಶುಲ್ಕ ಪಡೆಯದೆಯೇ ಈ ಸೇವೆಯನ್ನು ಒದಗಿಸಲು ಮುಂದೆ ಬಂದಿದೆ’ ಎಂದು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಬುಧವಾರ ತಿಳಿಸಿದರು.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡಿಜಿಟಲ್ ಕರ್ನಾಟಕದ ಮೂಲಕ ಡಿಜಿಟಲ್ ಇಂಡಿಯಾದ ಕನಸು ಸಾಕಾರಗೊಳಿಸುವುದು ನಮ್ಮ ಗುರಿ. ಇದನ್ನು ಸಾಕಾರಗೊಳಿಸುವ ನಿಟ್ಟಿನ ಮೊದಲ ಹೆಜ್ಜೆಯಾಗಿ ನಗರದಲ್ಲಿ ಕ್ಷಿಪ್ರ ವೇಗದ ಇಂಟರ್ನೆಟ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಎಸಿಟಿ ಸಂಸ್ಥೆಯು ವೈ–ಫೈ ಗೋಪುರಗಳ ಜೊತೆ ಸಿಸಿಟಿವಿ ಕ್ಯಾಮರಾಗಳನ್ನೂ ಅಳವಡಿಸಲಿದೆ. ಈ ಯೋಜನೆಗೆ ಸಂಸ್ಥೆ ₹ 100 ಕೋಟಿ ವೆಚ್ಚಮಾಡಲಿದೆ. ಯೋಜನೆ ಪೂರ್ಣಗೊಳ್ಳಲು 9 ತಿಂಗಳು ಬೇಕು’ ಎಂದು ಸಚಿವರು ವಿವರಿಸಿದರು.
ಎಸಿಟಿ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಾಲ ಮಲ್ಲಾಡಿ, ‘ಬೆಂಗಳೂರನ್ನು ಡಿಜಿಟಲ್ ಸಿಟಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ದೊರೆತಿರುವ ಈ ಅವಕಾಶಕ್ಕೆ ಧನ್ಯವಾದ ಹೇಳುತ್ತೇವೆ. ಈ ಮೂಲಕ ನಗರದ ಜನ ಜೀವನದಲ್ಲಿ ಬದಲಾವಣೆ ತರುವ ಉದ್ದೇಶ ನಮ್ಮದು. ವೈ–ಫೈ ಗೋಪುರಗಳ ನಿರ್ವಹಣೆಗೆ ಬಿಬಿಎಂಪಿ ವತಿಯಿಂದ ವಿದ್ಯುತ್ಪೂರೈಸಬೇಕು. ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ’ ಎಂದುತಿಳಿಸಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…