ಉಡುಪಿ : ಫ್ಲೆಕ್ಸ್ ಬ್ಯಾನರ್ ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಫ್ಲೆಕ್ಸ್ ಬ್ಯಾನರ್ಗಳು ಮತ್ತು ಅನಧೀಕೃತ ಬ್ಯಾನರ್ಗಳು ಕಂಡುಬಂದಿದ್ದು, ತಕ್ಷಣ ತೆರವುಗೊಳಿಸಬೇಕೆಂದು ಆದೇಶಿಸಲಾಗಿದೆ.
ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದ್ದಲ್ಲಿ 1000 ರೂ ಹಾಗೂ ಎರಡನೇ ಬಾರಿ ನಿಯಮ ಉಲ್ಲಂಘಿಸಿದ್ದಲ್ಲಿ 2000 ರೂ. ದಂಡ ವಿಧಿಸಲಾಗುವುದು. ಹಾಗೂ ಮೂರನೇ ಬಾರಿ ಪ್ರಕರಣ ದಾಖಲಿಸುವುದು ಅಥವಾ ಅಂಗಡಿ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದಾರೆ. ಬದಲಿ ವ್ಯವಸ್ಥೆಯಾಗಿ ಬಟ್ಟೆಯಿಂದ ಅಥವಾ ಪೇಪರ್ ನಿಂದ ತಯಾರಿಸುವ ಬ್ಯಾನರ್, ತೋರಣ ಬಂಟಿಗ್ಸ್, ಬಾವುಟ ಇವುಗಳನ್ನು ಮಾತ್ರ ಉಪಯೋಗಿಸಬೇಕು. ಈ ಕಟ್ಟುನಿಟ್ಟಿನ ಕ್ರಮವನ್ನು ಉಲ್ಲಂಘಿಸಿದ್ದಲ್ಲಿ ಮುಖ್ಯಾಧಿಕಾರಿ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಕಡ್ಡಾಯವಾಗಿ ಬಟ್ಟೆಯ ಬ್ಯಾನರ್ಗಳನ್ನು ಬಳಸಬೇಕು. ಅವಧಿ ಮುಗಿದ ತಕ್ಷಣ ಬ್ಯಾನರ್ ತೆರವುಗೊಳಿಸಬೇಕು. ಬ್ಯಾನರ್ ಅಳವಡಿಸುವ ದಿನಾಂಕ, ಸಮಯದ ವಿವರ ಸಂಬಂಧಪಟ್ಟ ಠಾಣೆಗೆ ತಿಳಿಸಬೇಕು. ಬ್ಯಾನರ್ ಅಳವಡಿಸುವ ಸಮಯದಲ್ಲಿ ಭದ್ರತೆಗೆ ಕಾವಲುಗಾರನ ನಿಯೋಜನೆ, ಸಿ.ಸಿ.ಟಿ.ವಿ ಕ್ಯಾಮರ ಅಳವಡಿಸಬೇಕು. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಅಳವಡಿಸುವುದು ಕಡ್ಡಾಯವಾಗಿರಬೇಕು. ಅಪಾಯಕಾರಿ ತಿರುವುಗಳಲ್ಲಿ ಬ್ಯಾನರ್ಗಳನ್ನು ಕಡ್ಡಾಯವಾಗಿ ಹಾಕುವಂತಿಲ್ಲ. ಬ್ಯಾನರ್ಗಳಿಗೆ ಕಡ್ಡಾಯವಾಗಿ ಆದೇಶ ಸಂಖ್ಯೆ, ದಿನಾಂಕ, ಬ್ಯಾನರ್ ಅಳವಡಿಕೆ ಅವಧಿಯನ್ನು ನಮೂದಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ, ಡಿವೈಡರ್ಗಳಲ್ಲಿ ಜಾಹೀರಾತು ಫಲಕ ಹಾಕುವಂತಿಲ್ಲ.
ಹೊರ ರಾಜ್ಯಗಳಿಂದ ನಿರಂತರವಾಗಿ ರಾಜ್ಯಕ್ಕೆ ಬರುತ್ತಿರುವ ನಿಷೇಧಿತ ಪ್ಲಾಸ್ಟಿಕ್ನ್ನು ರಾಜ್ಯದ ಗಡಿಭಾಗದ ಚೆಕ್ ಪೋಸ್ಟ್ಗಳಲ್ಲಿಯೇ ತಡೆಗಟ್ಟಲು ಸಂಬಂಧಪಟ್ಟ ಇಲಾಖೆಗಳಾದ ಸಾರಿಗೆ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳ ಅನುಷ್ಟಾನಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ಜಿಲ್ಲಾ ಮಟ್ಟದಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪಾದನೆ ಮಾಡುವ ಘಟಕಗಳನ್ನು ಮುಚ್ಚುವ ಆದೇಶ ನೀಡುವ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕ್ರಮ ಕೈಗೊಳ್ಳಬೇಕು. ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುವ ಅಂಗಡಿ, ಮುಂಗಟ್ಟು ಮತ್ತು ಮಾಲ್ಗಳ ಮೇಲೆ ದಾಳಿ ನಡೆಸಿ, ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಬೇಕು ಮತ್ತು ನಿಯಮಾನುಸಾರ ಉಲ್ಲಂಘಿತರಿಗೆ ದಂಡ ವಿಧಿಸಬೇಕು.
ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮತ್ತು ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರುಗಳಿಗೆ ನಿರ್ದೇಶನ ನೀಡುವಂತೆ ಹಾಗೂ ಸರ್ಕಾರದ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…