Featured

ಡಿವೈಡರ್ ಗಳಲ್ಲಿ ಜಾಹೀರಾತು ಫಲಕ ಹಾಕುವಂತಿಲ್ಲ,ಅನಧಿಕೃತ ಬ್ಯಾನರ್ ಗಳನ್ನು ತಕ್ಷಣ ತೆರವುಗೊಳಿಸಿ : ಉಡುಪಿ ಜಿಲ್ಲಾಧಿಕಾರಿ – Vishwanews24

ಉಡುಪಿ :  ಫ್ಲೆಕ್ಸ್ ಬ್ಯಾನರ್ ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಫ್ಲೆಕ್ಸ್ ಬ್ಯಾನರ್‍ಗಳು ಮತ್ತು ಅನಧೀಕೃತ ಬ್ಯಾನರ್‍ಗಳು ಕಂಡುಬಂದಿದ್ದು, ತಕ್ಷಣ ತೆರವುಗೊಳಿಸಬೇಕೆಂದು ಆದೇಶಿಸಲಾಗಿದೆ.

ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದ್ದಲ್ಲಿ 1000 ರೂ ಹಾಗೂ ಎರಡನೇ ಬಾರಿ ನಿಯಮ ಉಲ್ಲಂಘಿಸಿದ್ದಲ್ಲಿ 2000 ರೂ. ದಂಡ ವಿಧಿಸಲಾಗುವುದು. ಹಾಗೂ ಮೂರನೇ ಬಾರಿ ಪ್ರಕರಣ ದಾಖಲಿಸುವುದು ಅಥವಾ ಅಂಗಡಿ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದಾರೆ. ಬದಲಿ ವ್ಯವಸ್ಥೆಯಾಗಿ ಬಟ್ಟೆಯಿಂದ ಅಥವಾ ಪೇಪರ್ ನಿಂದ ತಯಾರಿಸುವ ಬ್ಯಾನರ್, ತೋರಣ ಬಂಟಿಗ್ಸ್, ಬಾವುಟ ಇವುಗಳನ್ನು ಮಾತ್ರ ಉಪಯೋಗಿಸಬೇಕು. ಈ ಕಟ್ಟುನಿಟ್ಟಿನ ಕ್ರಮವನ್ನು ಉಲ್ಲಂಘಿಸಿದ್ದಲ್ಲಿ ಮುಖ್ಯಾಧಿಕಾರಿ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಕಡ್ಡಾಯವಾಗಿ ಬಟ್ಟೆಯ ಬ್ಯಾನರ್‍ಗಳನ್ನು ಬಳಸಬೇಕು. ಅವಧಿ ಮುಗಿದ ತಕ್ಷಣ ಬ್ಯಾನರ್ ತೆರವುಗೊಳಿಸಬೇಕು. ಬ್ಯಾನರ್ ಅಳವಡಿಸುವ ದಿನಾಂಕ, ಸಮಯದ ವಿವರ ಸಂಬಂಧಪಟ್ಟ ಠಾಣೆಗೆ ತಿಳಿಸಬೇಕು. ಬ್ಯಾನರ್ ಅಳವಡಿಸುವ ಸಮಯದಲ್ಲಿ ಭದ್ರತೆಗೆ ಕಾವಲುಗಾರನ ನಿಯೋಜನೆ, ಸಿ.ಸಿ.ಟಿ.ವಿ ಕ್ಯಾಮರ ಅಳವಡಿಸಬೇಕು. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಅಳವಡಿಸುವುದು ಕಡ್ಡಾಯವಾಗಿರಬೇಕು. ಅಪಾಯಕಾರಿ ತಿರುವುಗಳಲ್ಲಿ ಬ್ಯಾನರ್‍ಗಳನ್ನು ಕಡ್ಡಾಯವಾಗಿ ಹಾಕುವಂತಿಲ್ಲ. ಬ್ಯಾನರ್‍ಗಳಿಗೆ ಕಡ್ಡಾಯವಾಗಿ ಆದೇಶ ಸಂಖ್ಯೆ, ದಿನಾಂಕ, ಬ್ಯಾನರ್ ಅಳವಡಿಕೆ ಅವಧಿಯನ್ನು ನಮೂದಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ, ಡಿವೈಡರ್‍ಗಳಲ್ಲಿ ಜಾಹೀರಾತು ಫಲಕ ಹಾಕುವಂತಿಲ್ಲ.

ಹೊರ ರಾಜ್ಯಗಳಿಂದ ನಿರಂತರವಾಗಿ ರಾಜ್ಯಕ್ಕೆ ಬರುತ್ತಿರುವ ನಿಷೇಧಿತ ಪ್ಲಾಸ್ಟಿಕ್‍ನ್ನು ರಾಜ್ಯದ ಗಡಿಭಾಗದ ಚೆಕ್ ಪೋಸ್ಟ್‍ಗಳಲ್ಲಿಯೇ ತಡೆಗಟ್ಟಲು ಸಂಬಂಧಪಟ್ಟ ಇಲಾಖೆಗಳಾದ ಸಾರಿಗೆ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳ ಅನುಷ್ಟಾನಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ಜಿಲ್ಲಾ ಮಟ್ಟದಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪಾದನೆ ಮಾಡುವ ಘಟಕಗಳನ್ನು ಮುಚ್ಚುವ ಆದೇಶ ನೀಡುವ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕ್ರಮ ಕೈಗೊಳ್ಳಬೇಕು. ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುವ ಅಂಗಡಿ, ಮುಂಗಟ್ಟು ಮತ್ತು ಮಾಲ್‍ಗಳ ಮೇಲೆ ದಾಳಿ ನಡೆಸಿ, ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಬೇಕು ಮತ್ತು ನಿಯಮಾನುಸಾರ ಉಲ್ಲಂಘಿತರಿಗೆ ದಂಡ ವಿಧಿಸಬೇಕು.

ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮತ್ತು ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರುಗಳಿಗೆ ನಿರ್ದೇಶನ ನೀಡುವಂತೆ ಹಾಗೂ ಸರ್ಕಾರದ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

16 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

16 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

16 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

19 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

20 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

20 hours ago