ರಾಜ್ಯ ನ್ಯೂಸ್

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಅಸಮಾಧಾನ ಡಿ.ಕೆ.ಬ್ರದರ್ಸ್.!!

ಕರ್ನಾಟಕದಲ್ಲಿ ಈಗಾಗಲೇ 222 ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ. ಮೇ ಹದಿನೈದು ರಂದು ಪ್ರಕಟವಾದ ಈ ಫಲಿತಾಂಶದಲ್ಲಿ ಅತಂತ್ರ ಫಲಿತಾಂಶ ಬಂದು ರಾಜ್ಯ ಕಳೆದೊಂದು ವಾರದಿಂದ ರಾಜಕೀಯ ಮೇಲಾಟಗಳಿಗೆ ಸಾಕ್ಷಿಯಾಗಿತ್ತು. ಇಂದು ಅದಕ್ಕೆಲ್ಲ ತೆರೆ ಬೀಳುವ ಲಕ್ಷಣಗಳು ಕಂಡು ಬರುತ್ತಿದ್ದು ಇಂದು ವಿಧಾನ ಸೌಧದ ಮುಂಭಾಗದಲ್ಲಿ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಪರಮೇಶ್ವರ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರು ಭಾರೀ ಲಾಭಿ ನಡೆಸಿದ್ದು ಈಗ ಈ ಹುದ್ದೆಗೆ ಪರಮೇಶ್ವರ್ ಅವರನ್ನು ಆಯ್ಕೆ ಮಾಡಿದ್ದಕ್ಕೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರ ಬರಲು ಮೂಲ ಕಾರಣರಾಗಿರುವ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು ಆದರೆ ಆ ಸ್ಥಾನ ಈಗ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪಾಲಾಗಿರುವುದರಿಂದ ಡಿಕೆಶಿ ಸಿಡಿದೆದ್ದಿದ್ದಾರೆ.

ಇಂದು ಮಾಧ್ಯಮಗಳಿಗೆ ಹೇಳಿಕೆಯೊಂದನ್ನು ನೀಡಿರುವ ಡಿ.ಕೆ.ಶಿವಕುಮಾರ್ ಅವರು ಪರಮೇಶ್ವರ್ ರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಕ್ಕಿದ್ದಕ್ಕೆ ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಪರಮೇಶ್ವರ್ ಅವರು ಕಳೆದ 8 ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಕುರ್ಚಿ ಬಿಡುತ್ತೇನೆ ಎಂದು ಆಗಾಗ ಹೇಳುತ್ತಿದ್ದರೂ ಸಹ ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ನಾನು ಫುಟ್ಬಾಲ್ ಆಡಲ್ಲ, ಚೆಸ್ ಆಡಿ ಚೆಕ್ ಕೊಡುವವನು ನೋಡೋಣ ಯಾವ ಸ್ಥಾನ ಸಿಗುತ್ತೆ ಎಂದು. ಎಲ್ಲದ್ದಕ್ಕೂ ಮಹೂರ್ತ, ಕಾಲ ಎಲ್ಲಾ ನೋಡಕೊಂಡಿರಲು ನಾನೇನು ಸನ್ಯಾಸಿಯಲ್ಲ ಎಂದು ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ..

ಇನ್ನು ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಅವರ ತಮ್ಮ ಹಾಗೂ ಸಂಸದರಾದ ಡಿ.ಕೆ.ಸುರೇಶ್ ಅವರೂ ಸಹ ಸಿಡಿದೆದ್ದಿದ್ದು ಕಾಂಗ್ರೆಸ್ ಶಾಸಕರಿದ್ದ ಹೋಟೆಲ್ ನಿಂದ ಅವರ ಬೆಂಬಲಿಗರೊಂದಿಗೆ ಚೆಕ್ ಔಟ್ ಆಗಿದ್ದಾರೆ. ಅಲ್ಲಿದ್ದ ಶಾಸಕರ ಸಮ್ಮುಖದಲ್ಲಿಯೇ ವಾಗ್ದಾಳಿ ನಡೆಸಿರುವ ಡಿ.ಕೆ.ಸುರೇಶ್ ಅವರು ಕೆಲಸ ಮಾಡಲು ಮಾತ್ರ ನಾವು ಬೇಕು ಅಧಿಕಾರ ಮಾತ್ರ ಬೇರೆಯವರಿಗಾ ಎಂದು ಗರಂ ಆಗಿ ಹೇಳಿದ್ದು ಇದು ಕಾಂಗ್ರೆಸ್ ಗೆ ಭಾರಿ ತಲೆನೋವಾಗಿ ಪರಿಣಮಿಸಿದೆ.

ಕಾಂಗ್ರೆಸ್ ವಿರುದ್ದ ಸಿಡಿದೆದ್ದಿರುವ ಡಿ.ಕೆ ಸುರೇಶ್ ಅವರನ್ನು ಸಮಾಧಾನ ಪಡಿಸಲು ಕೆಪಿಸಿಸಿ ಕಾರ್ಯದರ್ಶಿ ಯಶೋಮತಿ ಠಾಕೂರ್ ಅವರು ಮುಂದಾದರೂ ಸಹ ಅದಕ್ಕೆಲ್ಲಾ ಕ್ಯಾರೇ ಎನ್ನದೇ ಏನು ಬೇಕಾದರೂ ಮಾಡಿಕೊಳ್ಳಿ ಎಂದು ಹೋಟೆಲ್ ನಿಂದ ತಮ್ಮ ಬೆಂಬಲಿಗರೊಂದಿಗೆ ಹೊರನಡೆದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಡಿ.ಕೆ ಸುರೇಶ್ ಹಾಗೂ ಅವರ ತಂಡ ಕಳೆದ 7 ದಿನಗಳಿಂದ ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ನೀಡುವುದರಿಂದ ಹಿಡಿದು ಎಲ್ಲವನ್ನೂ ನೋಡಿಕೊಂಡಿತ್ತು. ಡಿ.ಕೆ.ಬ್ರದರ್ಸ್ ಈ ಹಿಂದೆ ಗುಜರಾತ್ ಶಾಸಕರನ್ನು ಕರ್ನಾಟಕಕ್ಕೆ ಕರೆತಂದಾಗ ಆ ಜವಾಬ್ದಾರಿಯನ್ನು ಸಹ ವಹಿಸಿಕೊಂಡು ರಾಷ್ಟ್ರದ ಗಮನ ಸೆಳೆದಿದ್ದರು.

ಇದಕ್ಕೂ ಮೊದಲು ಲಿಂಗಾಯತ ಸಮುದಾಯದ ಶಾಸಕರಿಂದ ಶಾಮನೂರು ಶಿವಶಂಕರಪ್ಪ ಅಥವಾ ಎಚ್ ಕೆ ಪಾಟೀಲ್ ಅವರನ್ನು, ಪ್ರತ್ಯೇಕ ಲಿಂಗಾಯತ ಬಣದ ಶಾಸಕರಿಂದ ಎಂಬಿ ಪಾಟೀಲ್ ಅವರನ್ನು ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಕೋಟಾದಲ್ಲಿ ಉಪ ಮುಖ್ಯಮಂತ್ರಿ ಮಾಡಬೇಕು ಎಂಬ ಕೂಗೆದ್ದಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಈ ಬೇಡಿಕೆಯನ್ನು ಒಪ್ಪದ ಕಾರಣ ಲಿಂಗಾಯತ ಸಮುದಾಯ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿತ್ತು

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

19 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

19 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

19 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

22 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

23 hours ago