ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಕಣದಿಂದ ಹಿಂದೆ ಸರಿದಿದ್ದಾರೆ.
ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣೆ ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಸತೀಶ ಜಾರಕಿಹೊಳಿಯವರ ಮನವೊಲಿಕೆ ಹಿನ್ನೆಲೆಯಲ್ಲಿ ಚುನಾವಣೆ ಕಣದಿಂದ ಚನ್ನರಾಜ್ ಹಿಂದಕ್ಕೆ ಸರಿದಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಅಧಿಕೃತವಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ಕಳೆದ ನಾಲ್ಕೈದು ತಿಂಗಳಿಂದ ಖಾನಾಪುರ ತಾಲೂಕಿನಿಂದ ಚನ್ನರಾಜ್ ಹಟ್ಟಿಹೊಳಿ ಕಣಕ್ಕಿಳಿಯಲು ತಯಾರಿ ನಡೆಸಿದ್ದರು. ಖಾನಾಪುರದ ಪಿಕೆಪಿಎಸ್ ನಿರ್ದೇಶಕರ ಮನ ಗೆಲ್ಲಲು ಚನ್ನರಾಜ್ ಯಶಸ್ವಿಯಾಗಿದ್ದರು ಜಿಲ್ಲೆಯ ರಾಜಕಾರಣ ಹಾಗೂ ರಾಜಕೀಯ ದೃಷ್ಟಿಯಿಂದ ಚನ್ನರಾಜ್ ಸ್ಪರ್ಧೆಯಿಂದ ಹಿಂಪಡೆಯಲಿದ್ದಾರೆ ಎಂದು ತಿಳಿಸಿದರು.
ಚುನಾವಣೆ ಕಣದಿಂದ ಚನ್ನರಾಜ್ ಹಿಂದೆ ಸರಿದಿದ್ದೇಕೆ ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…