ಮಂಗಳೂರು: ತುಳು ಪರಿಷತ್ ಆಶ್ರಯದಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನವನ್ನು ಡಿಸೆಂಬರ್ನಲ್ಲಿ ಮಂಗಳೂರು ಪುರಭವನದಲ್ಲಿಆಯೋಜಿಸಲು ಉದ್ದೇಶಿಸಲಾಗಿದೆ.
ನಗರದ ಖಾಸಗಿ ಹೋಟೆಲ್ನ ಸಭಾಂಗಣದಲ್ಲಿನಡೆದ ತುಳು ಪರಿಷತ್ ಕೇಂದ್ರೀಯ ಸಮಿತಿ ಸಭೆಯಲ್ಲಿಸಮ್ಮೇಳನದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ವಿದ್ಯಾರ್ಥಿ ತುಳು ಸಮ್ಮೇಳನ ಆಯೋಜನಾ ಸಮಿತಿಯ ಗೌರವಾಧ್ಯಕ್ಷರಾಗಿ ಕಲಾವಿದ, ಸಂಘಟಕ ಸ್ವರ್ಣ ಸುಂದರ್ ಅವರನ್ನು ಆಯ್ಕೆ ಮಾಡಲಾಯಿತು.
ತುಳು ಪರಿಷತ್ ಅಧ್ಯಕ್ಷ ಹಾಗೂ ಸಮ್ಮೇಳನ ಸಮಿತಿಯ ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ , ‘ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುವರು. ಕಾಲೇಜು ವಿದ್ಯಾರ್ಥಿಗಳೇ ಸಮ್ಮೇಳನದ ಗೋಷ್ಠಿ, ಕಾರ್ಯಕ್ರಮಗಳನ್ನು ನಡೆಸಿಕೊಡುವರು’ ಎಂದು ವಿವರ ನೀಡಿದರು.
ತುಳು ಪರಿಷತ್ ಪ್ರಧಾನ ಕಾರ್ಯದರ್ಶಿ ಬೆನೆಟ್ ಅಮ್ಮನ್ನ ಮಾತನಾಡಿ, ‘ಈ ಸಮ್ಮೇಳನದ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಬದುಕಿನ ಸಂಶೋಧನೆ, ದಾಖಲೀಕರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ’ ಎಂದು ತಿಳಿಸಿದರು.
ವಿದ್ಯಾರ್ಥಿ ತುಳು ಸಮ್ಮೇಳನದ ವಿವಿಧ ಕಾರ್ಯಕ್ರಮ ಸ್ವರೂಪಗಳ ಬಗ್ಗೆ ಸಭೆಯಲ್ಲಿಚರ್ಚೆ ನಡೆಯಿತು. ಈ ಚರ್ಚೆಯಲ್ಲಿ ತುಳು ಪರಿಷತ್ ಸದಸ್ಯರುಗಳಾದ ಸುಭಾಶ್ಚಂದ್ರ ಕಣ್ವತೀರ್ಥ , ಗೋಪಾಲ್ ಅಂಚನ್ , ಅಕ್ಷತಾ ಶೆಟ್ಟಿ , ಶೋಭಾ ಶೆಟ್ಟಿ , ರಮೇಶ್ ಮಂಚಕಲ್, ಬಾಬು ಪಾಂಗಾಳ, ಇಸ್ಮಾಯಿಲ್ ಪೆರಿಂಜೆ, ಸುದರ್ಶನ್, ಅಮಿತಾ ಆಳ್ವಾ, ಮಣಿ ರೈ, ಅವಿನಾಶ್, ಹರೀಶ್, ವಸಂತ್, ದಿನೇಶ್, ಜಯಲಕ್ಷ್ಮೀ ಶೆಟ್ಟಿ, ,ಭರತೇಶ್ ಮೊದಲಾದವರು ಭಾಗವಹಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…