Featured

ಡಿಸೆಂಬರ್‌ನಲ್ಲಿ ಮಂಗಳೂರು ಪುರಭವನದಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನ -Vishwanews24

ಮಂಗಳೂರು: ತುಳು ಪರಿಷತ್‌ ಆಶ್ರಯದಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನವನ್ನು ಡಿಸೆಂಬರ್‌ನಲ್ಲಿ ಮಂಗಳೂರು ಪುರಭವನದಲ್ಲಿಆಯೋಜಿಸಲು ಉದ್ದೇಶಿಸಲಾಗಿದೆ.

ನಗರದ ಖಾಸಗಿ ಹೋಟೆಲ್‌ನ ಸಭಾಂಗಣದಲ್ಲಿನಡೆದ ತುಳು ಪರಿಷತ್‌ ಕೇಂದ್ರೀಯ ಸಮಿತಿ ಸಭೆಯಲ್ಲಿಸಮ್ಮೇಳನದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ವಿದ್ಯಾರ್ಥಿ ತುಳು ಸಮ್ಮೇಳನ ಆಯೋಜನಾ ಸಮಿತಿಯ ಗೌರವಾಧ್ಯಕ್ಷರಾಗಿ ಕಲಾವಿದ, ಸಂಘಟಕ ಸ್ವರ್ಣ ಸುಂದರ್‌ ಅವರನ್ನು ಆಯ್ಕೆ ಮಾಡಲಾಯಿತು.

ತುಳು ಪರಿಷತ್ ಅಧ್ಯಕ್ಷ ಹಾಗೂ ಸಮ್ಮೇಳನ ಸಮಿತಿಯ ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ , ‘ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುವರು.   ಕಾಲೇಜು ವಿದ್ಯಾರ್ಥಿಗಳೇ ಸಮ್ಮೇಳನದ ಗೋಷ್ಠಿ, ಕಾರ್ಯಕ್ರಮಗಳನ್ನು ನಡೆಸಿಕೊಡುವರು’ ಎಂದು ವಿವರ ನೀಡಿದರು.

ತುಳು ಪರಿಷತ್ ಪ್ರಧಾನ ಕಾರ್ಯದರ್ಶಿ ಬೆನೆಟ್ ಅಮ್ಮನ್ನ ಮಾತನಾಡಿ, ‘ಈ ಸಮ್ಮೇಳನದ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಬದುಕಿನ ಸಂಶೋಧನೆ, ದಾಖಲೀಕರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ’ ಎಂದು ತಿಳಿಸಿದರು.

ವಿದ್ಯಾರ್ಥಿ ತುಳು ಸಮ್ಮೇಳನದ ವಿವಿಧ ಕಾರ್ಯಕ್ರಮ ಸ್ವರೂಪಗಳ ಬಗ್ಗೆ ಸಭೆಯಲ್ಲಿಚರ್ಚೆ ನಡೆಯಿತು. ಈ ಚರ್ಚೆಯಲ್ಲಿ ತುಳು ಪರಿಷತ್‌ ಸದಸ್ಯರುಗಳಾದ ಸುಭಾಶ್ಚಂದ್ರ ಕಣ್ವತೀರ್ಥ , ಗೋಪಾಲ್‌ ಅಂಚನ್‌ , ಅಕ್ಷತಾ ಶೆಟ್ಟಿ , ಶೋಭಾ ಶೆಟ್ಟಿ , ರಮೇಶ್‌ ಮಂಚಕಲ್‌, ಬಾಬು ಪಾಂಗಾಳ, ಇಸ್ಮಾಯಿಲ್‌ ಪೆರಿಂಜೆ, ಸುದರ್ಶನ್‌, ಅಮಿತಾ ಆಳ್ವಾ, ಮಣಿ ರೈ, ಅವಿನಾಶ್‌, ಹರೀಶ್‌, ವಸಂತ್‌, ದಿನೇಶ್‌, ಜಯಲಕ್ಷ್ಮೀ ಶೆಟ್ಟಿ, ,ಭರತೇಶ್‌ ಮೊದಲಾದವರು ಭಾಗವಹಿಸಿದರು.

 

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

32 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

45 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago