Featured

ಡಿಸೆಂಬರ್‌ನಲ್ಲಿ ಮಂಗಳೂರು ಪುರಭವನದಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನ -Vishwanews24

ಮಂಗಳೂರು: ತುಳು ಪರಿಷತ್‌ ಆಶ್ರಯದಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನವನ್ನು ಡಿಸೆಂಬರ್‌ನಲ್ಲಿ ಮಂಗಳೂರು ಪುರಭವನದಲ್ಲಿಆಯೋಜಿಸಲು ಉದ್ದೇಶಿಸಲಾಗಿದೆ.

ನಗರದ ಖಾಸಗಿ ಹೋಟೆಲ್‌ನ ಸಭಾಂಗಣದಲ್ಲಿನಡೆದ ತುಳು ಪರಿಷತ್‌ ಕೇಂದ್ರೀಯ ಸಮಿತಿ ಸಭೆಯಲ್ಲಿಸಮ್ಮೇಳನದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ವಿದ್ಯಾರ್ಥಿ ತುಳು ಸಮ್ಮೇಳನ ಆಯೋಜನಾ ಸಮಿತಿಯ ಗೌರವಾಧ್ಯಕ್ಷರಾಗಿ ಕಲಾವಿದ, ಸಂಘಟಕ ಸ್ವರ್ಣ ಸುಂದರ್‌ ಅವರನ್ನು ಆಯ್ಕೆ ಮಾಡಲಾಯಿತು.

ತುಳು ಪರಿಷತ್ ಅಧ್ಯಕ್ಷ ಹಾಗೂ ಸಮ್ಮೇಳನ ಸಮಿತಿಯ ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ , ‘ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುವರು.   ಕಾಲೇಜು ವಿದ್ಯಾರ್ಥಿಗಳೇ ಸಮ್ಮೇಳನದ ಗೋಷ್ಠಿ, ಕಾರ್ಯಕ್ರಮಗಳನ್ನು ನಡೆಸಿಕೊಡುವರು’ ಎಂದು ವಿವರ ನೀಡಿದರು.

ತುಳು ಪರಿಷತ್ ಪ್ರಧಾನ ಕಾರ್ಯದರ್ಶಿ ಬೆನೆಟ್ ಅಮ್ಮನ್ನ ಮಾತನಾಡಿ, ‘ಈ ಸಮ್ಮೇಳನದ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಬದುಕಿನ ಸಂಶೋಧನೆ, ದಾಖಲೀಕರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ’ ಎಂದು ತಿಳಿಸಿದರು.

ವಿದ್ಯಾರ್ಥಿ ತುಳು ಸಮ್ಮೇಳನದ ವಿವಿಧ ಕಾರ್ಯಕ್ರಮ ಸ್ವರೂಪಗಳ ಬಗ್ಗೆ ಸಭೆಯಲ್ಲಿಚರ್ಚೆ ನಡೆಯಿತು. ಈ ಚರ್ಚೆಯಲ್ಲಿ ತುಳು ಪರಿಷತ್‌ ಸದಸ್ಯರುಗಳಾದ ಸುಭಾಶ್ಚಂದ್ರ ಕಣ್ವತೀರ್ಥ , ಗೋಪಾಲ್‌ ಅಂಚನ್‌ , ಅಕ್ಷತಾ ಶೆಟ್ಟಿ , ಶೋಭಾ ಶೆಟ್ಟಿ , ರಮೇಶ್‌ ಮಂಚಕಲ್‌, ಬಾಬು ಪಾಂಗಾಳ, ಇಸ್ಮಾಯಿಲ್‌ ಪೆರಿಂಜೆ, ಸುದರ್ಶನ್‌, ಅಮಿತಾ ಆಳ್ವಾ, ಮಣಿ ರೈ, ಅವಿನಾಶ್‌, ಹರೀಶ್‌, ವಸಂತ್‌, ದಿನೇಶ್‌, ಜಯಲಕ್ಷ್ಮೀ ಶೆಟ್ಟಿ, ,ಭರತೇಶ್‌ ಮೊದಲಾದವರು ಭಾಗವಹಿಸಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago