ಮಂಗಳೂರು: ತುಳು ಪರಿಷತ್ ಆಶ್ರಯದಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನವನ್ನು ಡಿಸೆಂಬರ್ನಲ್ಲಿ ಮಂಗಳೂರು ಪುರಭವನದಲ್ಲಿಆಯೋಜಿಸಲು ಉದ್ದೇಶಿಸಲಾಗಿದೆ.
ನಗರದ ಖಾಸಗಿ ಹೋಟೆಲ್ನ ಸಭಾಂಗಣದಲ್ಲಿನಡೆದ ತುಳು ಪರಿಷತ್ ಕೇಂದ್ರೀಯ ಸಮಿತಿ ಸಭೆಯಲ್ಲಿಸಮ್ಮೇಳನದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ವಿದ್ಯಾರ್ಥಿ ತುಳು ಸಮ್ಮೇಳನ ಆಯೋಜನಾ ಸಮಿತಿಯ ಗೌರವಾಧ್ಯಕ್ಷರಾಗಿ ಕಲಾವಿದ, ಸಂಘಟಕ ಸ್ವರ್ಣ ಸುಂದರ್ ಅವರನ್ನು ಆಯ್ಕೆ ಮಾಡಲಾಯಿತು.
ತುಳು ಪರಿಷತ್ ಅಧ್ಯಕ್ಷ ಹಾಗೂ ಸಮ್ಮೇಳನ ಸಮಿತಿಯ ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ , ‘ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುವರು. ಕಾಲೇಜು ವಿದ್ಯಾರ್ಥಿಗಳೇ ಸಮ್ಮೇಳನದ ಗೋಷ್ಠಿ, ಕಾರ್ಯಕ್ರಮಗಳನ್ನು ನಡೆಸಿಕೊಡುವರು’ ಎಂದು ವಿವರ ನೀಡಿದರು.
ತುಳು ಪರಿಷತ್ ಪ್ರಧಾನ ಕಾರ್ಯದರ್ಶಿ ಬೆನೆಟ್ ಅಮ್ಮನ್ನ ಮಾತನಾಡಿ, ‘ಈ ಸಮ್ಮೇಳನದ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಬದುಕಿನ ಸಂಶೋಧನೆ, ದಾಖಲೀಕರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ’ ಎಂದು ತಿಳಿಸಿದರು.
ವಿದ್ಯಾರ್ಥಿ ತುಳು ಸಮ್ಮೇಳನದ ವಿವಿಧ ಕಾರ್ಯಕ್ರಮ ಸ್ವರೂಪಗಳ ಬಗ್ಗೆ ಸಭೆಯಲ್ಲಿಚರ್ಚೆ ನಡೆಯಿತು. ಈ ಚರ್ಚೆಯಲ್ಲಿ ತುಳು ಪರಿಷತ್ ಸದಸ್ಯರುಗಳಾದ ಸುಭಾಶ್ಚಂದ್ರ ಕಣ್ವತೀರ್ಥ , ಗೋಪಾಲ್ ಅಂಚನ್ , ಅಕ್ಷತಾ ಶೆಟ್ಟಿ , ಶೋಭಾ ಶೆಟ್ಟಿ , ರಮೇಶ್ ಮಂಚಕಲ್, ಬಾಬು ಪಾಂಗಾಳ, ಇಸ್ಮಾಯಿಲ್ ಪೆರಿಂಜೆ, ಸುದರ್ಶನ್, ಅಮಿತಾ ಆಳ್ವಾ, ಮಣಿ ರೈ, ಅವಿನಾಶ್, ಹರೀಶ್, ವಸಂತ್, ದಿನೇಶ್, ಜಯಲಕ್ಷ್ಮೀ ಶೆಟ್ಟಿ, ,ಭರತೇಶ್ ಮೊದಲಾದವರು ಭಾಗವಹಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…