Featured

ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಶೇ.90 ರಷ್ಟು ಲಸಿಕಾಕರಣ ಗುರಿ : ಸಿಎಂ. ಬೊಮ್ಮಾಯಿ – Vishwanews24

ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಶೇ.90 ರಷ್ಟು ಲಸಿಕಾಕರಣ ಗುರಿ : ಸಿಎಂ  ಬೊಮ್ಮಾಯಿ – Vishwanews24

ಹುಬ್ಬಳ್ಳಿ: ಕೋವಿಡ್ ಅಲೆ ಎದುರಿಸುವ ಕಾರ್ಯವು ರಾಜ್ಯ ಮತ್ತು ದೇಶದ ಆರೋಗ್ಯ ವ್ಯವಸ್ಥೆಯ ಸಾಮಥ್ರ್ಯ ಮತ್ತು ಕೊರತೆಗಳೆರಡನ್ನೂ ಪರಿಚಯಿಸಿದೆ. ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳಲ್ಲಿ ಗುಣಾತ್ಮಕ ಮತ್ತು ಗಮನಾರ್ಹ ಅಭಿವೃದ್ಧಿ ತರಲು ಕಾರಣವಾಗಿದೆ. ಭಾರತ ದೇಶದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದಕ್ಕಾಗಿ ಹೆಮ್ಮೆ ಪಡೋಣ ಆದರೆ ವಿಶ್ರಮಿಸುವುದು ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ಆವರಣದ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ 100 ಕೋಟಿ ಲಸಿಕಾಕರಣ ಭಾರತ ದೇಶದ ಪಯಣ ಕಾರ್ಯಕ್ರಮ ಹಾಗೂ ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ ಸಮರ್ಪಣೆ ಮಾಡಿ ಮಾತನಾಡಿದ ಅವರು, ವಿಪತ್ತನ್ನು ಕೂಡ ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಬೇಕು (Convert calamity into opportunity) ಎಂಬ ಮಾತನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ನಿಜ ಎಂದು ಮಾಡಿ ತೋರಿಸಿದೆ. ಕೋವಿಡ್ ವೈರಾಣು ಕಾಲಿಟ್ಟಾಗ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪಿಪಿಇ ಕಿಟ್, ಮಾಸ್ಕ್, ಕೈಗವಸುಗಳಿರಲಿಲ್ಲ. ಇಂದು ಈ ಉತ್ಪನ್ನಗಳನ್ನಷ್ಟೇ ಅಲ್ಲ, ಕೋವಿಡ್ ಲಸಿಕೆಯನ್ನು ಕೂಡ ರಫ್ತು ಮಾಡುವ ಸಾಮರ್ಥ್ಯ ಗಳಿಸಿಕೊಂಡಿದ್ದೇವೆ ಎಂದರು.

ಭಾರತದ ಈ ಸಾಧನೆಗೆ ವಿಶ್ವವೇ ಬೆರಗಾಗಿದೆ. ಕಳೆದ ಜನವರಿ 16 ರಿಂದ ದೇಶದಲ್ಲಿ ಕೋವಿಡ್ ಲಸಿಕೆ ನೀಡಲು ಪ್ರಾರಂಭಿಸಲಾಯಿತು. ಹಂತ ಹಂತವಾಗಿ ಹೆಚ್ಚಳ ಮಾಡುತ್ತಾ ಇದೀಗ ಕೇವಲ ಹತ್ತು ತಿಂಗಳ ಅವಧಿಯಲ್ಲಿ ನೂರು ಕೋಟಿ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದರ ಹಿಂದೆ ವೈದ್ಯರು, ಅರೆವೈದ್ಯಕೀಯ, ಆರೋಗ್ಯ ಕಾರ್ಯಕರ್ತರ,ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯ ಶ್ರಮವಿದೆ. ಈ ಸಂದರ್ಭದಲ್ಲಿ ಅವರೆಲ್ಲರನ್ನೂ ಅಭಿನಂದಿಸುತ್ತೇನೆ. ಇನ್ನು 3-4 ತಿಂಗಳ ಅವಧಿಯಲ್ಲಿ ಮತ್ತೆ ನೂರು ಕೋಟಿ ಲಸಿಕೆ ನೀಡುವ ಗುರಿ ಇದೆ. ರಾಜ್ಯದಲ್ಲಿಯೂ ಡಿಸೆಂಬರ್ ಅಂತ್ಯದ ವೇಳೆಗೆ ಶೇ.90 ರಷ್ಟು ಜನರಿಗೆ ಮೊದಲ ಡೋಸ್ ಹಾಗೂ ಶೇ.70 ರಷ್ಟು ಎರಡನೇ ಡೋಸ್ ಲಸಿಕೆ ನೀಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.

ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುವಾಗ ಲಸಿಕಾಕರಣವೇ ಮದ್ದು ಎಂಬುದು ನೂರು ವರ್ಷಗಳ ಹಿಂದೆಯೇ ಸಾಬೀತಾಗಿದೆ. ಪೆನ್ಸಿಲಿನ್‍ನಿಂದ ಪೋಲಿಯೋವರೆಗೆ ಅನೇಕ ಲಸಿಕೆಗಳು ಮನುಷ್ಯನಿಗೆ ಬಾಹ್ಯವಾಗಿ ಶಕ್ತಿ ತುಂಬಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲಾಗಿದೆ. ವೈರಾಣುಗಳಿಗೆ ಭೌಗೋಳಿಕ ಮತ್ತು ಖಗೋಳಿಯ ಗಡಿಗಳು ಇರುವುದಿಲ್ಲ. ಅಣುಸ್ಫೋಟದಂತೆ ಅದು ವೇಗವಾಗಿ ಹರಡಬಲ್ಲದು. ವೈರಾಣು ರೂಪಾಂತರಗೊಳ್ಳುವುದು ನಮ್ಮ ಮುಂದಿರುವ ಸವಾಲಾಗಿದೆ. ವಿಜ್ಞಾನಿಗಳು ಈ ನಿಟ್ಟಿನಲ್ಲಿ ಸಂಶೋಧನೆಗಳಲ್ಲಿ ಕಾರ್ಯತತ್ಪರರಾಗಿದ್ದಾರೆ. ಕೋವಿಡ್‍ನಿಂದಾಗಿ ದೇಶ ಮಾತ್ರವಲ್ಲ, ಇಡೀ ವಿಶ್ವ ಸಮುದಾಯದ ಒಟ್ಟು ಆರೋಗ್ಯ ಸದೃಢವಾಗಿರಬೇಕು ಎಂಬ ಪಾಠ ಕಲಿತಿದ್ದೇವೆ. ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿದೆ. ನಮ್ಮ ರಾಜ್ಯದ ಆಸ್ಪತ್ರೆಗಳಲ್ಲಿ ಒಂದೇ ವರ್ಷದಲ್ಲಿ 1 ಲಕ್ಷ 25 ಸಾವಿರ ಹಾಸಿಗೆಗಳ ಸಾಮರ್ಥ್ಯ ಹೆಚ್ಚಾಗಿದೆ. ನಾಲ್ಕು ಸಾವಿರ ವೈದ್ಯಾಧಿಕಾರಿಗಳ ನೇಮಕ ಮಾಡಿಕೊಳ್ಳಲಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿಯೂ ಕೂಡ ಆಕ್ಸಿಜನ್ ಬೆಡ್‍ಗಳ ಸೌಲಭ್ಯ ಸ್ಥಾಪನೆಯಾಗಿವೆ. ವೈದ್ಯಕೀಯ ಆಮ್ಲಜನಕ ಉತ್ಪಾದನೆ ಹಾಗೂ ಪೂರೈಕೆ ಸಮರ್ಪಕ ಮತ್ತು ಸಶಕ್ತವಾಗಿದೆ ಎಂದು ವಿವರಿಸಿದರು.

Vishwa News 24

Recent Posts

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

16 minutes ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

38 minutes ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

54 minutes ago

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

1 hour ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

1 hour ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

1 hour ago