Featured

ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಶೇ.90 ರಷ್ಟು ಲಸಿಕಾಕರಣ ಗುರಿ : ಸಿಎಂ. ಬೊಮ್ಮಾಯಿ – Vishwanews24

ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಶೇ.90 ರಷ್ಟು ಲಸಿಕಾಕರಣ ಗುರಿ : ಸಿಎಂ  ಬೊಮ್ಮಾಯಿ – Vishwanews24

ಹುಬ್ಬಳ್ಳಿ: ಕೋವಿಡ್ ಅಲೆ ಎದುರಿಸುವ ಕಾರ್ಯವು ರಾಜ್ಯ ಮತ್ತು ದೇಶದ ಆರೋಗ್ಯ ವ್ಯವಸ್ಥೆಯ ಸಾಮಥ್ರ್ಯ ಮತ್ತು ಕೊರತೆಗಳೆರಡನ್ನೂ ಪರಿಚಯಿಸಿದೆ. ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳಲ್ಲಿ ಗುಣಾತ್ಮಕ ಮತ್ತು ಗಮನಾರ್ಹ ಅಭಿವೃದ್ಧಿ ತರಲು ಕಾರಣವಾಗಿದೆ. ಭಾರತ ದೇಶದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದಕ್ಕಾಗಿ ಹೆಮ್ಮೆ ಪಡೋಣ ಆದರೆ ವಿಶ್ರಮಿಸುವುದು ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ಆವರಣದ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ 100 ಕೋಟಿ ಲಸಿಕಾಕರಣ ಭಾರತ ದೇಶದ ಪಯಣ ಕಾರ್ಯಕ್ರಮ ಹಾಗೂ ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ ಸಮರ್ಪಣೆ ಮಾಡಿ ಮಾತನಾಡಿದ ಅವರು, ವಿಪತ್ತನ್ನು ಕೂಡ ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಬೇಕು (Convert calamity into opportunity) ಎಂಬ ಮಾತನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ನಿಜ ಎಂದು ಮಾಡಿ ತೋರಿಸಿದೆ. ಕೋವಿಡ್ ವೈರಾಣು ಕಾಲಿಟ್ಟಾಗ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪಿಪಿಇ ಕಿಟ್, ಮಾಸ್ಕ್, ಕೈಗವಸುಗಳಿರಲಿಲ್ಲ. ಇಂದು ಈ ಉತ್ಪನ್ನಗಳನ್ನಷ್ಟೇ ಅಲ್ಲ, ಕೋವಿಡ್ ಲಸಿಕೆಯನ್ನು ಕೂಡ ರಫ್ತು ಮಾಡುವ ಸಾಮರ್ಥ್ಯ ಗಳಿಸಿಕೊಂಡಿದ್ದೇವೆ ಎಂದರು.

ಭಾರತದ ಈ ಸಾಧನೆಗೆ ವಿಶ್ವವೇ ಬೆರಗಾಗಿದೆ. ಕಳೆದ ಜನವರಿ 16 ರಿಂದ ದೇಶದಲ್ಲಿ ಕೋವಿಡ್ ಲಸಿಕೆ ನೀಡಲು ಪ್ರಾರಂಭಿಸಲಾಯಿತು. ಹಂತ ಹಂತವಾಗಿ ಹೆಚ್ಚಳ ಮಾಡುತ್ತಾ ಇದೀಗ ಕೇವಲ ಹತ್ತು ತಿಂಗಳ ಅವಧಿಯಲ್ಲಿ ನೂರು ಕೋಟಿ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದರ ಹಿಂದೆ ವೈದ್ಯರು, ಅರೆವೈದ್ಯಕೀಯ, ಆರೋಗ್ಯ ಕಾರ್ಯಕರ್ತರ,ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯ ಶ್ರಮವಿದೆ. ಈ ಸಂದರ್ಭದಲ್ಲಿ ಅವರೆಲ್ಲರನ್ನೂ ಅಭಿನಂದಿಸುತ್ತೇನೆ. ಇನ್ನು 3-4 ತಿಂಗಳ ಅವಧಿಯಲ್ಲಿ ಮತ್ತೆ ನೂರು ಕೋಟಿ ಲಸಿಕೆ ನೀಡುವ ಗುರಿ ಇದೆ. ರಾಜ್ಯದಲ್ಲಿಯೂ ಡಿಸೆಂಬರ್ ಅಂತ್ಯದ ವೇಳೆಗೆ ಶೇ.90 ರಷ್ಟು ಜನರಿಗೆ ಮೊದಲ ಡೋಸ್ ಹಾಗೂ ಶೇ.70 ರಷ್ಟು ಎರಡನೇ ಡೋಸ್ ಲಸಿಕೆ ನೀಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.

ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುವಾಗ ಲಸಿಕಾಕರಣವೇ ಮದ್ದು ಎಂಬುದು ನೂರು ವರ್ಷಗಳ ಹಿಂದೆಯೇ ಸಾಬೀತಾಗಿದೆ. ಪೆನ್ಸಿಲಿನ್‍ನಿಂದ ಪೋಲಿಯೋವರೆಗೆ ಅನೇಕ ಲಸಿಕೆಗಳು ಮನುಷ್ಯನಿಗೆ ಬಾಹ್ಯವಾಗಿ ಶಕ್ತಿ ತುಂಬಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲಾಗಿದೆ. ವೈರಾಣುಗಳಿಗೆ ಭೌಗೋಳಿಕ ಮತ್ತು ಖಗೋಳಿಯ ಗಡಿಗಳು ಇರುವುದಿಲ್ಲ. ಅಣುಸ್ಫೋಟದಂತೆ ಅದು ವೇಗವಾಗಿ ಹರಡಬಲ್ಲದು. ವೈರಾಣು ರೂಪಾಂತರಗೊಳ್ಳುವುದು ನಮ್ಮ ಮುಂದಿರುವ ಸವಾಲಾಗಿದೆ. ವಿಜ್ಞಾನಿಗಳು ಈ ನಿಟ್ಟಿನಲ್ಲಿ ಸಂಶೋಧನೆಗಳಲ್ಲಿ ಕಾರ್ಯತತ್ಪರರಾಗಿದ್ದಾರೆ. ಕೋವಿಡ್‍ನಿಂದಾಗಿ ದೇಶ ಮಾತ್ರವಲ್ಲ, ಇಡೀ ವಿಶ್ವ ಸಮುದಾಯದ ಒಟ್ಟು ಆರೋಗ್ಯ ಸದೃಢವಾಗಿರಬೇಕು ಎಂಬ ಪಾಠ ಕಲಿತಿದ್ದೇವೆ. ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿದೆ. ನಮ್ಮ ರಾಜ್ಯದ ಆಸ್ಪತ್ರೆಗಳಲ್ಲಿ ಒಂದೇ ವರ್ಷದಲ್ಲಿ 1 ಲಕ್ಷ 25 ಸಾವಿರ ಹಾಸಿಗೆಗಳ ಸಾಮರ್ಥ್ಯ ಹೆಚ್ಚಾಗಿದೆ. ನಾಲ್ಕು ಸಾವಿರ ವೈದ್ಯಾಧಿಕಾರಿಗಳ ನೇಮಕ ಮಾಡಿಕೊಳ್ಳಲಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿಯೂ ಕೂಡ ಆಕ್ಸಿಜನ್ ಬೆಡ್‍ಗಳ ಸೌಲಭ್ಯ ಸ್ಥಾಪನೆಯಾಗಿವೆ. ವೈದ್ಯಕೀಯ ಆಮ್ಲಜನಕ ಉತ್ಪಾದನೆ ಹಾಗೂ ಪೂರೈಕೆ ಸಮರ್ಪಕ ಮತ್ತು ಸಶಕ್ತವಾಗಿದೆ ಎಂದು ವಿವರಿಸಿದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

12 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

12 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

14 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

14 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

14 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

15 hours ago