ಬೆಂಗಳೂರು : ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ರಾಜ್ಯ ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಮಾಡಲು ಹೊರಟಿದ್ದು ಇದರಿಂದ ರಾಜ್ಯದ ಕನ್ನಡ ಪರ ಸಂಘಟನೆಗಳು ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ದನಿ ಎತ್ತಿದ್ದಾರೆ ಕೂಡಲೇ ಸರಕಾರ ತಮ್ಮ ನಿಲುವನ್ನು ಬದಲಿಸಬೇಕೆಂದು ಹೇಳಿದ್ದು, ಇಲ್ಲದಿದ್ದಲ್ಲಿ ಬಂದ್ ಶತಃಸಿದ್ಧ ಎಂದಿದ್ದಾರೆ.
ಕರ್ನಾಟಕ ಬಂದ್ ಕುರಿತು ಸುದ್ದಿಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್ ಯಾವುದೇ ಕಾರಣಕ್ಕೂ ಡಿಸೆಂಬರ್ 5ರ ಬಂದ್ ಹಿಂಪಡೆಯುವುದಿಲ್ಲ, ಬಂದ್ ಮಾಡಿಯೇ ಸಿದ್ದ ಎಂದಿದ್ದಾರೆ ಸಾಧ್ಯವಾದರೆ ಸರಕಾರ ನಮ್ಮ ಬಂದ್ ತಡೆಯಲಿ ಎಂದು ಹೇಳಿದ್ದಾರೆ.
ಡಿಸೆಂಬರ್ 5 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಸುತ್ತೇವೆ ಎಂದಿದ್ದಾರೆ.
ಮರಾಠ ನಿಗಮ ರಚನೆಯನ್ನು ಕೈಬಿಡಲು ನವೆಂಬರ್ 30ರ ವರೆಗೆ ಕಾಲಾವಕಾಶ ನೀಡಿದ್ದು ಸರಕಾರ ಇದಕ್ಕೆ ಸ್ಪಂದಿಸದಿದ್ದಲ್ಲಿ ಬಂದ್ ಬಿಸಿ ತಾಗಲಿದೆ ಎಂದಿದ್ದಾರೆ.
ಕರ್ನಾಟಕ ಬಂದ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗಳು ಭಾಗವಹಿಸಲು ವಾಟಾಳ್ ನಾಗರಾಜ್ ಮನವಿಯನ್ನು ಮಾಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…