Featured

ಡಿಸೆಂಬರ್ 6 ರಿಂದ ಉಡುಪಿ ಸಂತೆಕಟ್ಟೆ ಮಾರುಕಟ್ಟೆ ಹೊಸ ಕಟ್ಟಡಕ್ಕೆ ಸ್ಥಳಾಂತರ -Vishwanews24

ಡಿಸೆಂಬರ್ 6 ರಿಂದ ಉಡುಪಿ ಸಂತೆಕಟ್ಟೆ ಮಾರುಕಟ್ಟೆ ಹೊಸ ಕಟ್ಟಡಕ್ಕೆ ಸ್ಥಳಾಂತರ -Vishwanews24

ಉಡುಪಿ,: ಉಡುಪಿ ನಗರಸಭೆ ವ್ಯಾಪ್ತಿಯ ಗೋಪಾಲಪುರ ವಾರ್ಡಿನಲ್ಲಿ (ಸಂತೆಕಟ್ಟೆ) ಮೌಂಟ್ ರೋಸರಿ ಚರ್ಚ್‌ನ ಎದುರು ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಮಾರುಕಟ್ಟೆ ಪರಿಸರದ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸಲಿದೆ. ಕಾಮಗಾರಿ ಪೂರ್ಣಗೊಂಡು ಎರಡು ವರ್ಷ ಕಳೆದರೂ ಅನೇಕ ಕಾರಣದಿಂದ ಇನ್ನೂ ಉದ್ಘಾಟನೆಗೊಂಡಿರಲಿಲ್ಲ.‌ ಆದರೆ ಮುಂದಿನ ಆದಿತ್ಯವಾರ ಡಿಸೆಂಬರ್ 6 ರಿಂದ ಸಂಪೂರ್ಣ ಸಂತೆ ಮಾರುಕಟ್ಟೆ ವೀರಭದ್ರ ದೇವಸ್ಥಾನದ ಬಳಿ ಕಟ್ಟಿದ ಹೊಸ ಕಟ್ಟಡಕ್ಕೆ ಸ್ಥಳಾಂತರವಾಗಲಿದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.

ಅನೇಕ ದಶಕಗಳಿಂದ ಸಂತೆ ಮಾರ್ಕೆಟ್ ನಡೆಯುತ್ತಿದ್ದು ಇತ್ತೀಚೆಗಂತೂ ಸರ್ವಿಸ್ ರಸ್ತೆಯ ಹೊರಗೆ ಡಿವೈಡರ್ ಮೇಲೆ ಒಂದು ಕಿ.ಮೀ ದೂರ ವಿಸ್ತರಿಸಿಕೊಂಡು ಜನರಿಗೆ, ವಾಹನ ಚಾಲಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಅನೇಕ ಬಾರಿ ಟ್ರಾಫಿಕ್ ತೊಂದರೆಯಾಗುತ್ತಿತ್ತು. ಟ್ರಾಫಿಕ್ ಪೋಲಿಸರು ವಾಹನಗಳನ್ನು ಸುಗಮ ಸಂಚಾರಕ್ಕೆ ತರಲು ಹರಸಾಹಸ ಪಡುತ್ತಿದ್ದರು.

2018ರಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಶಿಲಾನ್ಯಾಸ ನೆರವೇರಿಸಿದ ಈ ಮಾರುಕಟ್ಟೆಯಲ್ಲಿ ಸುಮಾರು 90 ಮಂದಿ ಕುಳಿತುಕೊಂಡು ವ್ಯಾಪಾರ ನಡೆಸಲು ಸ್ಥಳಾವಕಾಶವಿದೆ. ನೀರು, ಪಾರ್ಕಿಂಗ್, ಚರಂಡಿ ವ್ಯವಸ್ಥೆ ಸೇರಿದಂತೆ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಇಲ್ಲಿ ಒದಗಿಸಲಾಗಿದೆ. ಈ ಕಟ್ಟಡವನ್ನು 17500 ಸ್ಕ್ವಾರ್ ಪೀಟ್ ವಿಸ್ತೀರ್ಣ ದಲ್ಲಿ ನಿರ್ಮಿಸಿಲಾಗಿದೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

1 day ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

1 day ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

2 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

2 days ago