ಉಡುಪಿ,: ಉಡುಪಿ ನಗರಸಭೆ ವ್ಯಾಪ್ತಿಯ ಗೋಪಾಲಪುರ ವಾರ್ಡಿನಲ್ಲಿ (ಸಂತೆಕಟ್ಟೆ) ಮೌಂಟ್ ರೋಸರಿ ಚರ್ಚ್ನ ಎದುರು ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಮಾರುಕಟ್ಟೆ ಪರಿಸರದ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸಲಿದೆ. ಕಾಮಗಾರಿ ಪೂರ್ಣಗೊಂಡು ಎರಡು ವರ್ಷ ಕಳೆದರೂ ಅನೇಕ ಕಾರಣದಿಂದ ಇನ್ನೂ ಉದ್ಘಾಟನೆಗೊಂಡಿರಲಿಲ್ಲ. ಆದರೆ ಮುಂದಿನ ಆದಿತ್ಯವಾರ ಡಿಸೆಂಬರ್ 6 ರಿಂದ ಸಂಪೂರ್ಣ ಸಂತೆ ಮಾರುಕಟ್ಟೆ ವೀರಭದ್ರ ದೇವಸ್ಥಾನದ ಬಳಿ ಕಟ್ಟಿದ ಹೊಸ ಕಟ್ಟಡಕ್ಕೆ ಸ್ಥಳಾಂತರವಾಗಲಿದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.
ಅನೇಕ ದಶಕಗಳಿಂದ ಸಂತೆ ಮಾರ್ಕೆಟ್ ನಡೆಯುತ್ತಿದ್ದು ಇತ್ತೀಚೆಗಂತೂ ಸರ್ವಿಸ್ ರಸ್ತೆಯ ಹೊರಗೆ ಡಿವೈಡರ್ ಮೇಲೆ ಒಂದು ಕಿ.ಮೀ ದೂರ ವಿಸ್ತರಿಸಿಕೊಂಡು ಜನರಿಗೆ, ವಾಹನ ಚಾಲಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಅನೇಕ ಬಾರಿ ಟ್ರಾಫಿಕ್ ತೊಂದರೆಯಾಗುತ್ತಿತ್ತು. ಟ್ರಾಫಿಕ್ ಪೋಲಿಸರು ವಾಹನಗಳನ್ನು ಸುಗಮ ಸಂಚಾರಕ್ಕೆ ತರಲು ಹರಸಾಹಸ ಪಡುತ್ತಿದ್ದರು.
2018ರಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಶಿಲಾನ್ಯಾಸ ನೆರವೇರಿಸಿದ ಈ ಮಾರುಕಟ್ಟೆಯಲ್ಲಿ ಸುಮಾರು 90 ಮಂದಿ ಕುಳಿತುಕೊಂಡು ವ್ಯಾಪಾರ ನಡೆಸಲು ಸ್ಥಳಾವಕಾಶವಿದೆ. ನೀರು, ಪಾರ್ಕಿಂಗ್, ಚರಂಡಿ ವ್ಯವಸ್ಥೆ ಸೇರಿದಂತೆ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಇಲ್ಲಿ ಒದಗಿಸಲಾಗಿದೆ. ಈ ಕಟ್ಟಡವನ್ನು 17500 ಸ್ಕ್ವಾರ್ ಪೀಟ್ ವಿಸ್ತೀರ್ಣ ದಲ್ಲಿ ನಿರ್ಮಿಸಿಲಾಗಿದೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…