ಹೊಸ ದಿಲ್ಲಿ: ಡಿಸೆಂಬರ್ 8 ಮಂಗಳವಾರದಂದು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಕಾಂಗ್ರೆಸ್ ಪಕ್ಷ ಬೆಂಬಲ ಸೂಚಿಸಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ರೈತ ಸಂಘಟನೆಗಳು ಬಂದ್ ಕರೆ ನೀಡಿದ್ದು, ಈ ಬಂದ್ ಕರೆಗೆ ತಮ್ಮ ಬೆಂಬಲವಿದೆ ಎಂದು ಕಾಂಗ್ರೆಸ್ ಹೇಳಿದೆ.
ಈ ಕುರಿತು ಹೊಸ ದಿಲ್ಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸೆಂಬರ್ 8 ಮಂಗಳವಾರದಂದು ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿವೆ. ನಾವು ಈ ಬಂದ್ಗೆ ಬೆಂಬಲ ಸೂಚಿಸುತ್ತೇವೆ ಎಂದಿದ್ದಾರೆ. ರೈತರ ಪರವಾಗ ನಾವು ಧರಣಿ ಸತ್ಯಾಗ್ರಹ ನಡೆಸೋದಾಗಿ ಹೇಳಿದ್ದಾರೆ. ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ಧಾರೆ.
ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೂಡಾ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ಪಕ್ಷ ಬಂದ್ಗೆ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರು ರೈತರ ಪರವಾಗಿದ್ದು, ರೈತರಿಗೆ ರಾಹುಲ್ ತಮ್ಮ ಬೆಂಬಲ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕೂಡಾ ನಮ್ಮ ಪಕ್ಷದ ಕಚೇರಿ ಬಳಿ ಪ್ರತಿಭಟನೆಗಳನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.
ಭಾರತೀಯ ಪ್ರವಾಸಿ ಸಾರಿಗೆ ಸಂಘ ಕೂಡಾ ಡಿಸೆಂಬರ್ 8ರ ಭಾರತ್ ಬಂದ್ ಕರೆಗೆ ತಮ್ಮ ಬೆಂಬಲ ಸೂಚಿಸಿದೆ. ದೇಶದೆಲ್ಲೆಯ 51 ಸಾರಿಗೆ ಸಂಘಗಳು ಬಂದ್ಗೆ ಬೆಂಬಲ ಸೂಚಿಸಿದ್ದು, ಪ್ರತಿಭಟನೆಗೆ ತೆರಳುವ ರೈತರನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಸಾಗಿಸುವ ಕೆಲಸ ಮಾಡೋದಾಗಿ ಸಂಘಟನೆ ಘೋಷಿಸಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…