ಕಲಬುರಗಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡು ಬಂದಿಲ್ಲ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿರವಾಗುತ್ತಿದೆ. ಹೀಗಾಗಿ ಪ್ರತಿಪಕ್ಷಗಳನ್ನು ನಿಯಂತ್ರಣದಲ್ಲಿ ಇಡಬೇಕೆಂದು ಈ ರೀತಿ ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಪಕ್ಷಗಳ ವಿರುದ್ಧ ಜಾರಿ ನಿರ್ದೆಶನಾಲಯ ಹಾಗೂ ಇತರ ಸಂಸ್ಥೆಗಳು ಅಸ್ತ್ರ ಬಳಸಿಕೊಳ್ಳುತ್ತಿದೆ. ಕರ್ನಾಟಕದಲ್ಲೂ ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಬೇರ ಪಕ್ಷಗಳನ್ನು ದುರ್ಬಲ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಕೂಡ ಕೊಲೆ ಆರೋಪಿಯ ಹೇಳಿಕೆ ಮೇರೆಗೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರತಿಪಕ್ಷಗಳ ವಿರುದ್ಧ ಸಿಬಿಐ, ಐಟಿ, ಇಡಿ ಎಲ್ಲವನ್ನೂ ಬಳಸಿ ಬ್ಲ್ಯಾಕ್ಮೇಲ್ ತಂತ್ರ ಮಾಡುತಿದ್ದಾರೆ ಎಂದು ಕಿಡಿಕಾರಿದರು.
ಅಧಿಕಾರಿಗಳ ವರ್ಗಾವಣೆ ಹೆಸರಲ್ಲಿ ರಾಜ್ಯ ಸರ್ಕಾರ ಹಣದ ದಂಧೆ ಮಾಡುತ್ತಿದೆ. ವರ್ಗಾವಣೆ ಕಲೆಕ್ಷನ್ ನಲ್ಲಿ ಬಾಹುಬಲಿ 2, ಕೆಜಿಎಫ್ ದಾಖಲೆ ಮೀರಿಸಿದೆ. ಆಪರೇಷನ್ ಕಮಲಕ್ಕೆ ಮಾಡಿರುವ ಖರ್ಚು ವೆಚ್ಚವನ್ನು ಈಗ ವರ್ಗಾವಣೆಯಲ್ಲಿ ಪಡೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…