ಬೆಂಗಳೂರು : ಡಿ.ಕೆ.ಶಿವಕುಮಾರ್ ನನಗೆ ಗಾಡ್ ಫಾದರ್, ನನ್ನ ಉಸಿರು ಇರುವವರೆಗೂ ನಾನು ಕಾಂಗ್ರೆಸ್ ನಲ್ಲಿರುತ್ತೇನೆ. ನಾನು ಕೆಪಿಸಿಸಿ ಸದಸ್ಯ ಕೂಡ ಹೌದು. ಆದರೆ ನನ್ನನ್ನು ಉಚ್ಛಾಟನೆ ಮಾಡಿರುವುದು ನೋವು ತಂದಿದೆ ಎಂದು ಕಾಂಗ್ರೆಸ್ ನಾಯಕ ಸಲೀಂ ಹೇಳಿಕೆ ನೀಡಿದ್ದಾರೆ.
ನೀರಾವರಿ ಇಲಾಖೆಯಲ್ಲಿ ನಡೆದ ನೂರಾರು ಕೋಟಿ ಅವ್ಯವಹಾರದ ಬಗ್ಗೆ ಮಾತನಾಡುತ್ತಿದ್ದೆವು. ನಾನು ಬಿ.ವೈ. ವಿಜಯೇಂದ್ರ ಅವರ ಬಗ್ಗೆ ಮಾತನಾಡಿದ್ದೆ. ಇದೆಲ್ಲವೂ ನಾನಾಡಿದ ಮಾತಿನ ಮುಂದಿನ ಭಾಗದಲ್ಲಿ ಇದೆ. ಆದರೆ ಅರ್ಧ ಮಾತ್ರ ತೋರಿಸಲಾಗಿದೆ. ಡಿಕೆಶಿ ಮೇಲಿನ ಐಟಿ ದಾಳಿ ಬಗ್ಗೆ ನಾನೇ ಹೋರಾಟ ಕೂಡ ಮಾಡಿದ್ದೆ. ತೊದಲು ಮಾತನಾಡುತ್ತಾರೆ ಎಂಬ ವೈರಲ್ ವಿಡಿಯೋ ಬಗ್ಗೆ ಚರ್ಚೆ ಮಾಡಿದ್ದೇನೆ ಬಿಟ್ಟರೆ ಡಿಕೆಶಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಇವಾಗ ಡಿಕೆಶಿ ಅವರಿಗೆ ಮುಖ ತೋರಿಸಲು ನನಗೆ ಮುಜುಗರವಾಗುತ್ತಿದೆ ಎಂದು ಹೇಳಿದ್ದಾರೆ.
ಸಲೀಂ ಮತ್ತು ಉಗ್ರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ನಡೆದ ಘಟನೆಯಿಂದ ನಾನು ಸಾಕಷ್ಟು ನೊಂದಿದ್ದೇನೆ. ನನಗೆ ಮುಖ ತೋರಿಸಲು ಮುಜುಗರವಾಗುತ್ತಿದೆ ಎಂದು ಸಲೀಂ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…