ಬೆಂಗಳೂರು : ಡಿ.ಕೆ.ಶಿವಕುಮಾರ್ ನನಗೆ ಗಾಡ್ ಫಾದರ್, ನನ್ನ ಉಸಿರು ಇರುವವರೆಗೂ ನಾನು ಕಾಂಗ್ರೆಸ್ ನಲ್ಲಿರುತ್ತೇನೆ. ನಾನು ಕೆಪಿಸಿಸಿ ಸದಸ್ಯ ಕೂಡ ಹೌದು. ಆದರೆ ನನ್ನನ್ನು ಉಚ್ಛಾಟನೆ ಮಾಡಿರುವುದು ನೋವು ತಂದಿದೆ ಎಂದು ಕಾಂಗ್ರೆಸ್ ನಾಯಕ ಸಲೀಂ ಹೇಳಿಕೆ ನೀಡಿದ್ದಾರೆ.
ನೀರಾವರಿ ಇಲಾಖೆಯಲ್ಲಿ ನಡೆದ ನೂರಾರು ಕೋಟಿ ಅವ್ಯವಹಾರದ ಬಗ್ಗೆ ಮಾತನಾಡುತ್ತಿದ್ದೆವು. ನಾನು ಬಿ.ವೈ. ವಿಜಯೇಂದ್ರ ಅವರ ಬಗ್ಗೆ ಮಾತನಾಡಿದ್ದೆ. ಇದೆಲ್ಲವೂ ನಾನಾಡಿದ ಮಾತಿನ ಮುಂದಿನ ಭಾಗದಲ್ಲಿ ಇದೆ. ಆದರೆ ಅರ್ಧ ಮಾತ್ರ ತೋರಿಸಲಾಗಿದೆ. ಡಿಕೆಶಿ ಮೇಲಿನ ಐಟಿ ದಾಳಿ ಬಗ್ಗೆ ನಾನೇ ಹೋರಾಟ ಕೂಡ ಮಾಡಿದ್ದೆ. ತೊದಲು ಮಾತನಾಡುತ್ತಾರೆ ಎಂಬ ವೈರಲ್ ವಿಡಿಯೋ ಬಗ್ಗೆ ಚರ್ಚೆ ಮಾಡಿದ್ದೇನೆ ಬಿಟ್ಟರೆ ಡಿಕೆಶಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಇವಾಗ ಡಿಕೆಶಿ ಅವರಿಗೆ ಮುಖ ತೋರಿಸಲು ನನಗೆ ಮುಜುಗರವಾಗುತ್ತಿದೆ ಎಂದು ಹೇಳಿದ್ದಾರೆ.
ಸಲೀಂ ಮತ್ತು ಉಗ್ರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ನಡೆದ ಘಟನೆಯಿಂದ ನಾನು ಸಾಕಷ್ಟು ನೊಂದಿದ್ದೇನೆ. ನನಗೆ ಮುಖ ತೋರಿಸಲು ಮುಜುಗರವಾಗುತ್ತಿದೆ ಎಂದು ಸಲೀಂ ಹೇಳಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…