Featured

ಡಿ ಕೆ ಶಿವಕುಮಾರ್ ನೀಡಿದ್ದ ‘ಐಫೋನ್ ಗಿಫ್ಟ್’ನ್ನು ತಿರಸ್ಕರಿಸಿದ ಬಿಜೆಪಿ ಸಂಸದರು..

ಬೆಂಗಳೂರು: ಕರ್ನಾಟಕ ಸರ್ಕಾರದ ಚಿಹ್ನೆ ಮತ್ತು ಸಚಿವ ಡಿ ಕೆ ಶಿವಕುಮಾರ್ ಅವರ ಫೋಟೋ ಅದರ ಕೆಳಗೆ ಮುದ್ರಣವಾಗಿರುವ ಚರ್ಮದ ಚೀಲವನ್ನು ನಿನ್ನೆ ಕರ್ನಾಟಕದ ಎಲ್ಲಾ ಸಂಸದರಿಗೆ ಕಳುಹಿಸಿಕೊಡಲಾಗಿತ್ತು. ದೆಹಲಿಯಲ್ಲಿ ಕಾವೇರಿ ನದಿ ನೀರಿನ ವಿವಾದ ಮತ್ತು ಇತರ ಕೆಲ ವಿಷಯಗಳ ಕುರಿತು ಚರ್ಚೆ ನಡೆಸಲು ಸಂಸದರಿಗೆ ಈ ರೀತಿಯಲ್ಲಿ ಆಹ್ವಾನ ನೀಡಲಾಗಿತ್ತು. ಆದರೆ ಅದೀಗ ವಿವಾದಕ್ಕೆ ಕಾರಣವಾಗಿದೆ.

ಕಾರಣ ಆ ಚರ್ಮದ ಬ್ಯಾಗಿನ ಒಳಗೆ ಐಫೋನ್-ಎಕ್ಸ್ ಇದ್ದಿದ್ದು. ದುಬಾರಿ ಬೆಲೆಯ ಐಫೋನ್ -ಎಕ್ಸ್ ನೀಡಿ ಎಲ್ಲಾ ಸಂಸದರನ್ನು ಆಹ್ವಾನಿಸಲಾಗಿತ್ತು. ಈ ಗಿಫ್ಟ್ ನ್ನು ಬಿಜೆಪಿ ಸಂಸದರು ಸಾರಾಸಗಟಾಗಿ ತಿರಸ್ಕರಿಸಿದ್ದಲ್ಲದೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ವಿರುದ್ಧ ಅದನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳಲು ನೋಡುತ್ತಿದ್ದಾರೆ. ರಾಜ್ಯದಲ್ಲಿ ಇಷ್ಟು ಸಮಸ್ಯೆಯಿರುವಾಗ, ರೈತರ ಸಾಲ ಮನ್ನಾ ಮಾಡಲು ಎಲ್ಲಿಂದ ಹಣ ತರುವುದು ಎಂದು ಮುಖ್ಯಮಂತ್ರಿಗಳು ಯೋಚಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಈ ರೀತಿಯ ದುಬಾರಿ ಗಿಫ್ಟ್ ನೀಡುವ ಅಗತ್ಯವೇನಿದೆ ಎಂದು ಬಿಜೆಪಿ ಸಂಸದರು ತಿರಸ್ಕರಿಸಿರುವುದು ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರಕ್ಕೆ ತೀವ್ರ ಮುಜುಗರ ತಂದೊಡ್ಡಿದೆ.

ಈ ಸುದ್ದಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಸಂಸದರಿಗೆ ಗಿಫ್ಟ್ ಕೊಟ್ಟಿದ್ದು ನಾನು. ಒಳ್ಳೆಯ ಹೃದಯ ಶ್ರೀಮಂತಿಕೆಯಿಂದ ವೈಯಕ್ತಿಕವಾಗಿ ಗಿಫ್ಟ್ ನೀಡಿದ್ದೇನೆ, ಆದರೆ ಕಾಮಾಲೆ ಕಣ್ಣಿಗೆ ಎಲ್ಲವೂ ಕೆಟ್ಟದಾಗಿಯೇ ಕಾಣುತ್ತದೆ ಎಂದು ಹೇಳಿದ್ದಾರೆ.

ಆದರೆ ಬಿಜೆಪಿಯವರು ಮಾತ್ರ ಇದನ್ನು ಸ್ವಾಗತಿಸಿಲ್ಲ. ದೆಹಲಿಯಲ್ಲಿ ಕರೆದಿರುವ ಸಭೆಯನ್ನು ಬಿಜೆಪಿ ಸಂಸದರು ಸ್ವಾಗತಿಸಿದರೆ ಗಿಫ್ಟ್ ನೀಡುವ ಅಗತ್ಯವಿರಲಿಲ್ಲ ಎಂದಿದ್ದಾರೆ. ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಪಿ ಸಿ ಮೋಹನ್, ಸಂಯಮವನ್ನು ಭೋದಿಸುವ ಸರ್ಕಾರ ದುಂದು ವೆಚ್ಚ ಮಾಡುತ್ತಿದೆ ಎಂದಿದ್ದಾರೆ. ನೈತಿಕ ನೆಲೆಯಲ್ಲಿ, ಸಾರ್ವಜನಿಕ ಹಣವನ್ನು ಪೌರ ಕಾರ್ಮಿಕರಿಗೆ ವೇತನ ನೀಡಲು ಬಳಸಿ ಮತ್ತು ರೈತರ ಸಮಸ್ಯೆಗಳನ್ನು ಬಗೆಹರಿಸಿ ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.

ಬಿಜೆಪಿ ಸಂಸದರು ಸಲಹೆಯೊಂದಿಗೆ ಗಿಫ್ಟ್ ನ್ನು ಹಿಂತಿರುಗಿಸಿದ ನಂತರ ದೆಹಲಿಯಲ್ಲಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಐಫೋನ್ ನ್ನು ಸಂಸದರಿಗೆ ನೀಡಲು ನಮ್ಮ ಸರ್ಕಾರ ಯಾವುದೇ ಪ್ರಸ್ತಾವನೆ ಪಡೆದಿಲ್ಲ. ನಾನು ಕೂಡ ಯಾವ ಸಂಸದರಿಗೂ ಐಫೋನ್ ಉಡುಗೊರೆ ನೀಡಲು ಆದೇಶ ನೀಡಿರಲಿಲ್ಲ. ಅನಧಿಕೃತವಾಗಿ ಕೊಟ್ಟಿದ್ದರೆ ಅದು ನನಗೆ ತಿಳಿದಿಲ್ಲ, ಯಾರು ಗಿಫ್ಟ್ ಕಳುಹಿಸಿದ್ದರು ಎಂಬುದು ಕೂಡ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago