ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಪರ್ಸಂಟೇಜ್ ಆರೋಪದ ಮಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷವೂ ಅಮಾನತು ಮಾಡಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ ” ಅಧಾರ ರಹಿತವಾಗಿ ಮಾತನಾಡಿದ ಸಲೀಂ ಅವರನ್ನು ಅಮಾನತು ಮಾಡಿದ್ದೇವೆ. ಆದರೆ ಯತ್ನಾಳ್, ವಿಶ್ವನಾಥ್, ಸುರೇಶ್ ಗೌಡ ಅವರುಗಳು ತಮ್ಮದೇ ಸರ್ಕಾರದ ವಿರುದ್ಧದ ಆರೋಪಗಳಿಗೆ ಬಿಜೆಪಿ ಪಕ್ಷವೂ ಯಾವುದೇ ಕ್ರಮ ಕೈಗೊಳ್ಳದಿರುವುದು ತಮ್ಮ ಸರ್ಕಾರದ ಭ್ರಷ್ಟಾಚಾರವನ್ನ ಒಪ್ಪಿಕೊಂಡಂತಾಗಿದೆ. ಅವರ ಆರೋಪಗಳಿಗೆ ಬಿಜೆಪಿ ಉತ್ತರಿಸಬೇಕಿದೆ ಎಂದು ಹೇಳಿದೆ.
ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ, ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ನಡುವೆ ಸಂಭಾಷಣೆ ನಡೆದಿದ್ದು . ಡಿಕೆಶಿ ಅವರು ಕಲೆಕ್ಷನ್ ಗಿರಾಕಿ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹೇಳಿರುವ ವಿಚಾರ ವೈರಲ್ ಆಗಿತ್ತು. ಶಿವಮೊಗ್ಗದ ಸಾಗರ ಮೂಲದ ಸಲೀಂ. ಕಳೆದ 15 ವರ್ಷಗಳಿಂದ ಡಿಕೆಶಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…