Featured

ಡಿ.ಕೆ. ಶಿವಕುಮಾರ್ ಯುವ ಕಾಂಗ್ರೆಸ್ ನಾಯಕರ ಪಾಲಿಗೆ ನೆಚ್ಚಿನ ರಾಜಕೀಯ ಗುರು , ಕಾಂಗ್ರೆಸಿನ ಆಶಾಕಿರಣ , ಡಿಕೆಶಿ ನೇತೃತ್ವದಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಗಲಿ : ಅಶೋಕ್ ಕುಮಾರ್ ಕೊಡವೂರು -Vishwanews24

ಡಿ.ಕೆ. ಶಿವಕುಮಾರ್ ಯುವ ಕಾಂಗ್ರೆಸ್ ನಾಯಕರ ಪಾಲಿಗೆ ನೆಚ್ಚಿನ ರಾಜಕೀಯ ಗುರು , ಕಾಂಗ್ರೆಸಿನ ಆಶಾಕಿರಣ , ತನ್ನ ಹೋರಾಟದ ಮೂಲಕವೇ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪಣತೊಟ್ಟಿದ್ದಾರೆ : ಅಶೋಕ್ ಕುಮಾರ್ ಕೊಡವೂರು -Vishwanews24

ಡಿಕೆಶಿ ನೇತೃತ್ವದಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಗಲಿ, ಪಕ್ಷ ತಳಮಟ್ಟದಿಂದ ಬೆಳೆಯಲಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ನಂತರ ಮೊತ್ತ ಮೊದಲ ಬಾರಿಗೆ ಉಡುಪಿಗೆ ಭೇಟಿ ನೀಡುತ್ತಿರುವ ಡಿ.ಕೆ. ಶಿವಕುಮಾರ್‌ರವರು ಓರ್ವ ನಿಷ್ಠಾವಂತ ಕಾಂಗ್ರೆಸ್ಸಿಗರಾಗಿದ್ದು ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿಯೂ ಕಾಂಗ್ರೆಸ್ ಪಾಲಿಗೆ ಟ್ರಬಲ್ ಶೂಟರ್ ಎಂದೇ ಖ್ಯಾತರಾದವರು.

ಪಕ್ಷವು ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲೆಲ್ಲಾ ತನ್ನ ಹಿತವನ್ನು ಬದಿಗಿರಿಸಿ ಪಕ್ಷವನ್ನು ಗೆಲುವಿನ ಪಥದತ್ತ ಮುನ್ನಡೆಸುವ ಧೀಮಂತ ವ್ಯಕ್ತಿತ್ವ ಇವರದ್ದು. ಅಧಿಕಾರ ಇರಲಿ ಇಲ್ಲದಿರಲಿ ಡಿ.ಕೆ. ಶಿವಕುಮಾರ್ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿರುತ್ತಾರೆ. ತನ್ನ ಮೂರುವರೆ ದಶಕಗಳ ರಾಜಕೀಯ ಜೀವನದುದ್ದಕ್ಕೂ ಪಕ್ಷವಹಿಸಿದ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಿದ ಶ್ರೇಯಸ್ಸು ಇವರದ್ದಾಗಿದೆ. ಕಾಂಗ್ರೆಸ್ ಮಟ್ಟಿಗೆ ಡಿಕೆಶಿಯವರು ಎಂದೆಂದೂ ಆಪದ್ಬಾಂದರೆನ್ನಬೇಕು.

ರಾಜ್ಯದ ಕರಾವಳಿ ಪ್ರದೇಶ ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಯ ನೆಲೆಯಾಗಿತ್ತು ನಾನಾ ಕಾರಣಗಳಿಂದ ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ನ ಹಿಡಿತ ಕಡಿಮೆಯಾಗತೊಡಗಿತು. ಕರಾವಳಿಯಲ್ಲಿ ಸಾಮರಸ್ಯ ಮೂಡಿಸುವುದರೊಂದಿಗೆ ಮತ್ತೆ ಕಾಂಗ್ರೆಸ್ ಪಕ್ಷವನ್ನು ಗತಕಾಲದ ಉಚ್ಚ್ರಾಯ ಸ್ಥಿತಿಗೆ ಕೊಂಡೊಯ್ಯುವ ಅವಶ್ಯಕತೆಯಿದೆ. ಇದೀಗ ರಾಜ್ಯದ ಚುಕ್ಕಾಣಿಯನ್ನು ಡಿಕೆಶಿ ವಹಿಸಿಕೊಳ್ಳುವ ಮೂಲಕ ಮತ್ತೆ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿದೆ. ಕಾರ್ಯಕರ್ತರು ಹಾಗೂ ನಾಯಕರ ನಡುವೆ ಕ್ಷೀಣಿಸುವ ಬಾಂಧವ್ಯವನ್ನು ವೃದ್ದಿಸುವ ಸಾಮರ್ಥ್ಯ ಡಿಕೆಶಿ ಅವರಿಗಿದೆ.

ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಡಿ.ಕೆ. ಶಿವಕುಮಾರ್ ಹೊಂದಿರುವ ಸಂಪರ್ಕ ಹಾಗೂ ಅವರು ಗಳಿಸಿದ ಸಾಮರ್ಥ್ಯ ಒಂದು ದಿನದ ಸಾಧನೆಯೇನಲ್ಲ. ವಿದ್ಯಾರ್ಥಿ ದೆಸೆಯಲ್ಲಿದ್ದ ವೇಳೆ ಅವರು ರೂಡಿಸಿಕೊಂಡ ನಾಯಕತ್ವ ಗುಣ ಹಾಗೂ ಕಾರ್ಯಕರ್ತರಾಗಿದ್ದ ಕಾಲದಿಂದಲೂ ತೋರಿದ ಪಕ್ಷ ನಿಷ್ಠೆಯ ಫಲವಾಗಿ ಡಿಕೆಶಿಯವರಿಗೆ ಪಕ್ಷದ ಅಧ್ಯಕ್ಷಗಾಧಿ ಸಿದ್ಧಿಸಿದೆ. ಶ್ರೀಯುತರು ರಾಜ್ಯಾಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆ ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ರಾಷ್ಟ್ರೀಯ ನಾಯಕರವರೆಗೂ ಅವರ ನಾಯಕತ್ವದ ಬಗ್ಗೆ ವಿಶ್ವಾಸ ಮೂಡಿದೆ. ಯುವ ಕಾರ್ಯಕರ್ತರ ಸಮೂಹದಲ್ಲೂ ಹೊಸ ಸಂಚಲನ ಆವರಿಸಿದೆ.

ಓರ್ವ ನಿಷ್ಟಾವಂತ ಕಾರ್ಯಕರ್ತನನ್ನು ಒಮ್ಮೆ ಡಿಕೆಶಿಯವರು ಗುರುತಿಸಿದರೆ ಆತ ನಾಯಕನಾಗುವುದು ಖಚಿತ. ಆತನ ಸಾಮರ್ಥ್ಯಕ್ಕೆ ಅನುಗುಣವಾಗಿ ಆತನನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ಆತನಿಗೆ ಜವಾಬ್ದಾರಿ ಹಾಗೂ ಅಧಿಕಾರವನ್ನು ನೀಡುತ್ತಾರೆ. ಇದರಿಂದಾಗಿಯೇ ಯುವ ಕಾಂಗ್ರೆಸ್ ನಾಯಕರ ಪಾಲಿಗೆ ನೆಚ್ಚಿನ ರಾಜಕೀಯ ಗುರು ಎಂದೇ ಗುರುತಿಸಿಕೊಂಡಿದ್ದಾರೆ.

ಕಾಂಗ್ರೆಸ್‌ನ ಆಶಾಕಿರಣ
ಗ್ರಾಮ ಪಂಚಾಯಿತಿನಿಂದ ಹಿಡಿದು ಲೋಕಸಭಾ ಚುನಾವಣೆಗಳವರೆಗೆ ಡಿ.ಕೆ. ಶಿವಕುಮಾರ್‌ರವರು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿಯೂ ಅಗ್ರಗಣ್ಯ ಪ್ರಚಾರಕ, ತನ್ನ ಹೋರಾಟದ ಮೂಲಕವೇ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪಣತೊಟ್ಟಿದ್ದಾರೆ. ಕಾಂಗ್ರೆಸಿನ ಆಶಾಕಿರಣವೂ ಹೌದು.
ಈ ಸಂದಿಗ್ಧ ಕಾಲ ಘಟ್ಟದಲ್ಲಿ ಕಾಂಗ್ರೆಸ್ ಹೈಕಮಾಂಡ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡಿದೆ. ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ನೇಮಕವಾಗಿನಿಂದಲೇ ಪಕ್ಷದ ಸಂಘಟನೆಯ ಕೆಲಸ ಕಾರ್ಯಗಳನ್ನು ಡಿಕೆಶಿಯವರು ಆರಂಭಿಸಿದ್ದು ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟವನ್ನು ನಡೆಸುತ್ತಲೇ ಬಂದಿದ್ದಾರೆ. ತಳಮಟ್ಟದಿಂದಲೇ ಕಾಂಗ್ರೆಸ್ ಬೇರುಗಳನ್ನು ಮತ್ತೆ ಗಟ್ಟಿ ಮಾಡಲು ಹೊರಟಿದ್ದಾರೆ ಮಾತ್ರವಲ್ಲದೆ ಹಿರಿಯ ನಾಯಕರನ್ನು ಮುಖತಃ ಭೇಟಿಯಾಗಿ ಅವರ ಆಶಿರ್ವಾದದೊಂದಿದೆ ಪಕ್ಷ ಸಂಘಟನೆಯ ಸಲಹೆ ಸೂಚನೆಗಳನ್ನು ಪಡೆಯುತ್ತಿದ್ದಾರೆ. ಡಿಕೆಶಿಯವರ ಈ ನಡೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಆಶಾವಾದ ಮೂಡಿಸಿದೆ.

ರಾಜ್ಯದಲ್ಲಿ ಪ್ರಥಮ ಬಾರಿಗೆ ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿರುವ ಡಿ.ಕೆ. ಶಿವಕುಮಾರ್‌ರವರ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಸಮರ್ಥವಾಗಿ ಸಂಘಟನೆಯಾಗಲಿದ್ದು. ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಡಿಕೆಶಿ ನೇತೃತ್ವದಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಗಲಿ, ಪಕ್ಷ ತಳಮಟ್ಟದಿಂದ ಬೆಳೆಯಲಿ ಎಂಬುದೇ ನಮ್ಮ ಹಾರೈಕೆ.

ಅಶೋಕ್ ಕುಮಾರ್ ಕೊಡವೂರು, ಅಧ್ಯಕ್ಷರು – ಜಿಲ್ಲಾ ಕಾಂಗ್ರೆಸ್ ಸಮಿತಿ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago