ಡಿ.ಕೆ.ಶಿವಕುಮಾರ್ ಸಿಎಂ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಕೆ. ಕೃಷ್ಣಮೂರ್ತಿ ಆಚಾರ್ಯ
ಉಡುಪಿ: ಕಾಂಗ್ರೆಸ್ ಪಕ್ಷದ ಅಜಾತಶತ್ರು ನಾಯಕ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಮೂಲಕ ಕರ್ನಾಟಕದಲ್ಲಿ ಅದರಲ್ಲೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಯುವಜನತೆಯಲ್ಲಿ ಹೊಸ ಹುರುಪಿನ ಅಲೆ ಎದ್ದಿದೆ. ಇದು ಎರಡೂ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಉಡುಪಿ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಸರಿಸಾಟಿ ಇಲ್ಲದಂತೆ ಸಂಘಟಿಸಿ, ಅಧಿಕಾರಕ್ಕೆ ತಂದ ಡಿ.ಕೆ.ಶಿವಕುಮಾರ್ ಅವರು ಇದೀಗ ಮುಖ್ಯಮಂತ್ರಿಯಾಗಿ ಸರ್ಕಾರವನ್ನು ಪುನಃರಚಿಸಿ ರಾಜ್ಯಕ್ಕೆ ಹೊಸ ಯೋಜನೆಗಳನ್ನು ನೀಡುವ ನಿರೀಕ್ಷೆ ಇದೆ.
ಸಿದ್ದರಾಮಯ್ಯ ಅವರು ಗ್ಯಾರಂಟಿಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಸುಭದ್ರ ಅಡಿಪಾಯ ಹಾಕಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ತಮ್ಮ ನೇರ ಮತ್ತು ದಿಟ್ಟ ಆಡಳಿತದ ಮೂಲಕ ರಾಜ್ಯದ ಅಭಿವೃದ್ಧಿಯಲ್ಲಿ ಹೊಸ ಎತ್ತರವನ್ನು ಸಾಧಿಸಲಿದ್ದಾರೆ ಎಂದು ಕೃಷ್ಣಮೂರ್ತಿ ಆಚಾರ್ಯ ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿದಾಗಲೆಲ್ಲಾ ಇಲ್ಲಿನ ಯುವಜನತೆಗೆ ಇಲ್ಲಿಯೇ ಉದ್ಯೋಗ ನೀಡುವುದಕ್ಕಾಗಿ ಬೃಹತ್ ಉದ್ಯಮಗಳನ್ನು ಸ್ಥಾಪಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ, ಅದಕ್ಕೀಗ ಕಾಲ ಕೂಡಿ ಬಂದಿದೆ ಎಂದವರು ಭರವಸೆ ವ್ಯಕ್ತಪಡಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…