Featured

ಡಿ.ಕೆ.ಶಿ ಪಕ್ಷದ ಶಿಸ್ತಿನ ಸಿಪಾಯಿ ; ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ :ಡಿಕೆ ಸುರೇಶ್ – vishwanews24

ಡಿ.ಕೆ.ಶಿ ಪಕ್ಷದ ಶಿಸ್ತಿನ ಸಿಪಾಯಿ ; ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ :ಡಿಕೆ ಸುರೇಶ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಮೊದಲಿಂದಲೂ ಪಕ್ಷದ ಶಿಸ್ತಿನ ಸಿಪಾಯಿ.ಪಕ್ಷದ ಹಿತದೃಷ್ಟಿಯಿಂದ ಶಾಸಕರ ಹಿತದೃಷ್ಟಿಯಿಂದ ಎಲ್ಲವನ್ನೂ ತಾಳ್ಮೆಯಿಂದ ನಡೆಸುತ್ತಿದ್ದಾರೆ. ಪಕ್ಷದ ಆದೇಶಕ್ಕೋಸ್ಕರ ಕಾಯುತ್ತಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ. ಸಿಎಂ ಸ್ಥಾನ ಅಷ್ಟು ಸುಲಭವಾಗಿ ಸಿಗುವ ಹುದ್ದೆ ಅಲ್ಲ. ನಮ್ಮ ಗುರಿ ಇರುವುದು 2028ರ ಚುನಾವಣೆ. ಪಕ್ಷದ ತೀರ್ಮಾನಕ್ಕೋಸ್ಕರ ಶಾಸಕರ ಹಿತದೃಷ್ಟಿಯಿಂದ ನೊಂದ ಕಾರ್ಯಕರ್ತರ ಹಿತದೃಷ್ಟಿಯಿಂದ ಸಹನೆಯಿಂದ ಕಾಯುತ್ತಿದ್ದಾರೆ. ನಾನು ಮೊದಲೇ ಹೇಳಿದ್ದೆ ಡಿ.ಕೆ.ಶಿವಕುಮಾರ್ ಅವರ ಹಣೆ ಬರಹದಲ್ಲಿ ಸಿಎಂ ಆಗಬೇಕು ಎಂದು ಬರೆದಿದ್ದರೆ ಆಗುತ್ತಾರೆ ಅಂತ. ಈಗಲೂ ಅದನ್ನೇ ಹೇಳುತ್ತೇನೆ. ಡಿ.ಕೆ.ಶಿವಕುಮಾರ್ ಪಕ್ಷ ನಿಷ್ಠ ವ್ಯಕ್ತಿ. ಕೆಲವರು ವ್ಯಕ್ತಿ ನಿಷ್ಠರು ಇರುತ್ತಾರೆ, ಇನ್ನೂ ಕೆಲವರು ಅಧಿಕಾರಕ್ಕಾಗಿ ಇರುತ್ತಾರೆ. ಈಗ ಅನಿವಾರ್ಯವಾಗಿ ಸೆಷನ್ ಬಂದಿದೆ. ಇವತ್ತು ಬಿಜೆಪಿ ಕೇಂದ್ರ ಸರ್ಕಾರ ರಾಷ್ಟ್ರದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಹಕ್ಕು ಕಿತ್ತುಕೊಂಡಿದೆ ಎಂದರು.

ಕಾಂಗ್ರೆಸ್‌ಗೆ ಎಲ್ಲಾ ವರ್ಗದ ಮತಗಳು ಸಹ ಬೇಕು. ಒಕ್ಕಲಿಗರು, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಸೇರಿದಂತೆ ಎಲ್ಲರ ಮತಗಳು ಕಾಂಗ್ರೆಸ್‌ಗೆ ಬೇಕಾಗಿದೆ. ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ನಿಷ್ಠರಾಗಿದ್ದಾರೆ. ಡಿಕೆಶಿವಕುಮಾರ್ ಅವರು ಎಲ್ಲ ನೋವುಗಳಲ್ಲೂ ಪಕ್ಷದ ಜೊತೆ ಇದ್ದಾರೆ. ಪಂಚಾಯತ್ ಚೇರಮನ್‌ಗಳೇ ಅಧಿಕಾರ ಬಿಡಲ್ಲ, ಅಣ್ಣ ಇನ್ವಿಟೇಷನ್‌ಗೆ ಹೆಸರು ಹಾಕಿಸಿದ್ದೀನಿ ಅಂತಾರೆ, ಮಾರ್ಚ್ ಕಳೆಯಲಿ ಅಂತಾರೆ ಕುರ್ಚಿಯನ್ನು ಅಷ್ಟು ಸುಲಭವಾಗಿ ಬಿಡಲ್ಲ. ರಾಜಕಾರಣದಲ್ಲಿ ನಂಬಿಕೆಗಳು ತುಂಬಾ ಮುಖ್ಯವಾಗುತ್ತದೆ. ರಾಹುಲ್ ಗಾಂಧಿ ರಾಷ್ಟ್ರೀಯ ಅಧ್ಯಕ್ಷರು. ಅವರು ಎಲ್ಲ ರೀತಿಯಲ್ಲೂ ಯೋಚನೆ ಮಾಡುತ್ತಾರೆ. ಎಲ್ಲರನ್ನೂ ಒಪ್ಪಿಸಿ ರಾಹುಲ್ ಗಾಂಧಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಧಿಕಾರನೂ ಶಾಶ್ವತ ಅಲ್ಲ, ತಾಳ್ಮೆನೂ ಶಾಶ್ವತ ಅಲ್ಲ ಎಂದು ನುಡಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago