Featured

ಡಿ.ಕೆ.ಶಿ ಪಕ್ಷದ ಶಿಸ್ತಿನ ಸಿಪಾಯಿ ; ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ :ಡಿಕೆ ಸುರೇಶ್ – vishwanews24

ಡಿ.ಕೆ.ಶಿ ಪಕ್ಷದ ಶಿಸ್ತಿನ ಸಿಪಾಯಿ ; ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ :ಡಿಕೆ ಸುರೇಶ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಮೊದಲಿಂದಲೂ ಪಕ್ಷದ ಶಿಸ್ತಿನ ಸಿಪಾಯಿ.ಪಕ್ಷದ ಹಿತದೃಷ್ಟಿಯಿಂದ ಶಾಸಕರ ಹಿತದೃಷ್ಟಿಯಿಂದ ಎಲ್ಲವನ್ನೂ ತಾಳ್ಮೆಯಿಂದ ನಡೆಸುತ್ತಿದ್ದಾರೆ. ಪಕ್ಷದ ಆದೇಶಕ್ಕೋಸ್ಕರ ಕಾಯುತ್ತಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ. ಸಿಎಂ ಸ್ಥಾನ ಅಷ್ಟು ಸುಲಭವಾಗಿ ಸಿಗುವ ಹುದ್ದೆ ಅಲ್ಲ. ನಮ್ಮ ಗುರಿ ಇರುವುದು 2028ರ ಚುನಾವಣೆ. ಪಕ್ಷದ ತೀರ್ಮಾನಕ್ಕೋಸ್ಕರ ಶಾಸಕರ ಹಿತದೃಷ್ಟಿಯಿಂದ ನೊಂದ ಕಾರ್ಯಕರ್ತರ ಹಿತದೃಷ್ಟಿಯಿಂದ ಸಹನೆಯಿಂದ ಕಾಯುತ್ತಿದ್ದಾರೆ. ನಾನು ಮೊದಲೇ ಹೇಳಿದ್ದೆ ಡಿ.ಕೆ.ಶಿವಕುಮಾರ್ ಅವರ ಹಣೆ ಬರಹದಲ್ಲಿ ಸಿಎಂ ಆಗಬೇಕು ಎಂದು ಬರೆದಿದ್ದರೆ ಆಗುತ್ತಾರೆ ಅಂತ. ಈಗಲೂ ಅದನ್ನೇ ಹೇಳುತ್ತೇನೆ. ಡಿ.ಕೆ.ಶಿವಕುಮಾರ್ ಪಕ್ಷ ನಿಷ್ಠ ವ್ಯಕ್ತಿ. ಕೆಲವರು ವ್ಯಕ್ತಿ ನಿಷ್ಠರು ಇರುತ್ತಾರೆ, ಇನ್ನೂ ಕೆಲವರು ಅಧಿಕಾರಕ್ಕಾಗಿ ಇರುತ್ತಾರೆ. ಈಗ ಅನಿವಾರ್ಯವಾಗಿ ಸೆಷನ್ ಬಂದಿದೆ. ಇವತ್ತು ಬಿಜೆಪಿ ಕೇಂದ್ರ ಸರ್ಕಾರ ರಾಷ್ಟ್ರದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಹಕ್ಕು ಕಿತ್ತುಕೊಂಡಿದೆ ಎಂದರು.

ಕಾಂಗ್ರೆಸ್‌ಗೆ ಎಲ್ಲಾ ವರ್ಗದ ಮತಗಳು ಸಹ ಬೇಕು. ಒಕ್ಕಲಿಗರು, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಸೇರಿದಂತೆ ಎಲ್ಲರ ಮತಗಳು ಕಾಂಗ್ರೆಸ್‌ಗೆ ಬೇಕಾಗಿದೆ. ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ನಿಷ್ಠರಾಗಿದ್ದಾರೆ. ಡಿಕೆಶಿವಕುಮಾರ್ ಅವರು ಎಲ್ಲ ನೋವುಗಳಲ್ಲೂ ಪಕ್ಷದ ಜೊತೆ ಇದ್ದಾರೆ. ಪಂಚಾಯತ್ ಚೇರಮನ್‌ಗಳೇ ಅಧಿಕಾರ ಬಿಡಲ್ಲ, ಅಣ್ಣ ಇನ್ವಿಟೇಷನ್‌ಗೆ ಹೆಸರು ಹಾಕಿಸಿದ್ದೀನಿ ಅಂತಾರೆ, ಮಾರ್ಚ್ ಕಳೆಯಲಿ ಅಂತಾರೆ ಕುರ್ಚಿಯನ್ನು ಅಷ್ಟು ಸುಲಭವಾಗಿ ಬಿಡಲ್ಲ. ರಾಜಕಾರಣದಲ್ಲಿ ನಂಬಿಕೆಗಳು ತುಂಬಾ ಮುಖ್ಯವಾಗುತ್ತದೆ. ರಾಹುಲ್ ಗಾಂಧಿ ರಾಷ್ಟ್ರೀಯ ಅಧ್ಯಕ್ಷರು. ಅವರು ಎಲ್ಲ ರೀತಿಯಲ್ಲೂ ಯೋಚನೆ ಮಾಡುತ್ತಾರೆ. ಎಲ್ಲರನ್ನೂ ಒಪ್ಪಿಸಿ ರಾಹುಲ್ ಗಾಂಧಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಧಿಕಾರನೂ ಶಾಶ್ವತ ಅಲ್ಲ, ತಾಳ್ಮೆನೂ ಶಾಶ್ವತ ಅಲ್ಲ ಎಂದು ನುಡಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago