ಬೆಂಗಳೂರು : ಹಿಂದಿ ಹೇರಿಕೆ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್ ನಲ್ಲಿ ಅನ್ಯಾಯ ಆಗುವುದರ ಕುರಿತು ನಿನ್ನೆ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕುರಿತು ಮಾತನಾಡಿದರು.ಇದಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ ತಿರುಗೇಟು ನೀಡಿದ್ದು ನಮ್ಮ ದೇಶ ಭವ್ಯ ಭಾರತ ಹೀಗಾಗಿ ದೇಶವನ್ನು ಒಡೆಯುವಂತಹ ಮಾತುಗಳನ್ನು ಯಾರು ಆಡಬಾರದು ಎಂದು ತಿರುಗೇಟು ನೀಡಿದರು.
ಈ ವಿಷಯದ ಕುರಿತಾಗಿ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಭಾರತ ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಆದಾಗ ನಾವು ಯಾರೂ ಹುಟ್ಟಿರಲಿಲ್ಲ. ಆದರೆ ಅದರ ಇತಿಹಾಸ ನಮಗೆ ಗೊತ್ತಿದೆ. ನಮ್ಮ ದೇಶ ಒಂದು ರಾಷ್ಟ್ರ ಒಂದು ದೇಶ ಅಂತಾನೇ ಇರಬೇಕು ಬೇಕು ಅಂತ ಡಿಕೆ ಸುರೇಶ್ ಗೆ ತಿರುಗೇಟು ಕೊಟ್ರು. ಸಂಸದ ಡಿಕೆ ಸುರೇಶ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಆದರೆ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಬೇಕಾದರೆ ಕೋಟ್ಯಾಂತರ ಜನರ ಬಲಿದಾನವಾಗಿದೆ.
ನೂರಾರು ವರ್ಷ ಹೋರಾಟಗಳು ನಡೆದಿವೆ. ಗಾಂಧೀಜಿಯಿಂದ ಹಿಡಿದು ಅನೇಕ ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕೆ ಸ್ವಾತಂತ್ರ್ಯ ತರಲು, ದೇಶ ಒಗ್ಗೂಡಿಸಲು ಹೋರಾಟ ಮಾಡಿದ್ದಾರೆ. ಅನೇಕರು ಹೋರಾಟಗಾರರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಯಾರೇ ಆದರೂ ದೇಶ ಒಗ್ಗೂಡಿಸುವ ಮಾತಾಡಬೇಕು. ಅದು ಬಿಟ್ಟು ಒಡೆಯೋ ಮಾತಾಡೋದು ಸರಿಯಲ್ಲ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…