Featured

ಡಿ. 10ರಿಂದ ಜ. 29ರವರೆಗೆ ಬೆಂಗಳೂರು-ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚಾರ  – Vishwanews24

ಡಿ. 10ರಿಂದ ಜ. 29ರವರೆಗೆ ಬೆಂಗಳೂರು-ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚಾರ

ಬೆಂಗಳೂರು : ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ, ಪ್ರಯಾಣಿಕರ ಒತ್ತಾಯದ ಮೆರೆಗೆ ಡಿ. 10ರಿಂದ ಜ. 29ರವರೆಗೆ (ರೈಲು ಸಂಖ್ಯೆ – 06563) ಬೆಂಗಳೂರು-ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚಾರ ಮಾಡಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಲಾಗಿದೆ

ಈ ರೈಲು ನಿಗದಿತ ಅವಧಿಯಲ್ಲಿ ಬರುವ ಪ್ರತಿ ಶನಿವಾರ ರಾತ್ರಿ 11.55 ಗಂಟೆಗೆ ಯಶವಂತಪುರ ರೈಲು ನಿಲ್ದಾಣದಿಂದ ಹೊರಡಲಿದೆ. ಮರುದಿನ ಭಾನುವಾರ ಮಧ್ಯಾಹ್ನ ಸುಮಾರು 12.55ಕ್ಕೆ ಮುರುಡೇಶ್ವರ ತಲುಪುತ್ತದೆ. ಈ ರೀತಿ ಸಾಪ್ತಾಹಿಕ ರೈಲು ಜನವರಿ 29ರವರೆಗೆ ಒಟ್ಟು ಎಂಟು ಭಾರಿ ಸಂಚರಿಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಯಶವಂತಪುರದಿಂದ ಹೊರಡುವ ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ ಮಾರ್ಗವಾಗಿ ಸಾಗಿ ಮುರುಡೇಶ್ವರ ತಲುಪಲಿದೆ. ಈ ಪ್ರತಿ ನಿಲ್ದಾಣಗಳಲ್ಲಿಯೂ ನಿಲುಗಡೆ ರೈಲಿಗೆ ಇರಲಿದೆ.

ಮರಳಿ ಮುರುಡೇಶ್ವರದಿಂದ ಇದೇ ಮಾರ್ಗವಾಗಿ ರೈಲು (ರೈಲು ಸಂಖ್ಯೆ -06564) ಡಿಸೆಂಬರ್ 11ರಿಂದ ಜನವರಿ 29ರವರೆಗೆ ಪ್ರತಿ ಭಾನುವಾರ ಮಧ್ಯಾಹ್ನ 1.30ಕ್ಕೆ ಹೊರಡಲಿದೆ. ಮರುದಿನ ಸೋಮವಾರ ಬೆಳಗ್ಗೆ 4 ಗಂಟೆಗೆ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದೆ.

ಹವಾನಿಯಂತ್ರಿತ ಎರಡನೇ ದರ್ಜೆಯ ಒಂದು ಬೋಗಿ, ಹವಾನಿಯಂತ್ರಿತ ಮೂರನೇ ದರ್ಜೆಯ ಎರಡು ಬೋಗಿಗಳು, ಏಳು ಸ್ಲೀಪರ್ ಕ್ಲಾಸ್, ನಾಲ್ಕು ದ್ವಿತೀಯ ದರ್ಜೆ ಸಾಮಾನ್ಯ ಬೋಗಿಗಳು ಸೇರಿದಂತೆ ಒಟ್ಟು 16 ಬೋಗಿಗಳನ್ನು ಈ ರೈಲು ಹೊಂದಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

24 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago