ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಹೊಸ ಬಾಂಬ್ ಸಿಡಿಸಿದ್ದು, “ರಾಜ್ಯ ಸಚಿವ ಸಂಪುಟದಲ್ಲಿ ಡಿ.10ರ ನಂತರ ಭಾರೀ ಬದಲಾವಣೆಯಾಗಲಿದೆ” ಎಂದಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಜೊತೆ ಕೆಲ ಸಚಿವರು ಸುತ್ತಾಡುತ್ತಲೇ ಇದ್ದಾರೆ. ಅವರು ಶಾಸಕರಿಗೆ ಸಮಯ ನೀಡುವುದಿಲ್ಲ. ಡಿ.10ರ ನಂತರ ಅಂತವರನ್ನು ಸಂಪುಟದಿಂದಲೇ ಕೈ ಬಿಡುವ ಚಿಂತನೆಗಳು ನಡೆದಿವೆ. ಎಲ್ಲಾ ಸಚಿವರ ಕೈಬಿಡುವ ಬಗ್ಗೆ ಚಿಂತನೆ ನಡೆದಿಲ್ಲ. ಕೆಲಸ ಮಾಡದೇ ಇರುವ ಸಚಿವರನ್ನು ಸಂಪುಟದಿಂದ ಕೈಬಿಡುವ ಚಿಂತನೆ ನಡೆದಿದೆ. ಸಿಎಂ ಬದಲಾವಣೆ ಆಗುವುದಿಲ್ಲ” ಎಂದು ಹೇಳಿದ್ದಾರೆ.
“ಕೆಲವು ಸಚಿವರು ಸಿಎಂ ಅವರೊಂದಿಗೆ ಓಡಾಡಿಕೊಂಡು ಇರುತ್ತಾರೆ. ಸಚಿವರು ಜಿಲ್ಲೆಗಳಿಗೆ ಹೋಗಿ ಕೆಲಸ ಮಾಡಲಿಲ್ಲ ಎಂದಾದಲ್ಲಿ ಮುಂದಿನ ದಿನಗಳಲ್ಲಿ ಗಂಭೀರವಾದ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.
ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಯತ್ನಾಳ್ ಅವರಿಗೆ ಗೌಪ್ಯ ಮಾಹಿತಿ ಬಂದಿರಬಹುದು. ರಾಜ್ಯಕ್ಕೆ ತೆರಳಿದ ಬಳಿಕ ಅವರ ಜೊತೆ ನಾನು ಮಾತುಕತೆ ನಡೆಸುತ್ತೇನೆ” ಎಂದಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…