ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಹೊಸ ಬಾಂಬ್ ಸಿಡಿಸಿದ್ದು, “ರಾಜ್ಯ ಸಚಿವ ಸಂಪುಟದಲ್ಲಿ ಡಿ.10ರ ನಂತರ ಭಾರೀ ಬದಲಾವಣೆಯಾಗಲಿದೆ” ಎಂದಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಜೊತೆ ಕೆಲ ಸಚಿವರು ಸುತ್ತಾಡುತ್ತಲೇ ಇದ್ದಾರೆ. ಅವರು ಶಾಸಕರಿಗೆ ಸಮಯ ನೀಡುವುದಿಲ್ಲ. ಡಿ.10ರ ನಂತರ ಅಂತವರನ್ನು ಸಂಪುಟದಿಂದಲೇ ಕೈ ಬಿಡುವ ಚಿಂತನೆಗಳು ನಡೆದಿವೆ. ಎಲ್ಲಾ ಸಚಿವರ ಕೈಬಿಡುವ ಬಗ್ಗೆ ಚಿಂತನೆ ನಡೆದಿಲ್ಲ. ಕೆಲಸ ಮಾಡದೇ ಇರುವ ಸಚಿವರನ್ನು ಸಂಪುಟದಿಂದ ಕೈಬಿಡುವ ಚಿಂತನೆ ನಡೆದಿದೆ. ಸಿಎಂ ಬದಲಾವಣೆ ಆಗುವುದಿಲ್ಲ” ಎಂದು ಹೇಳಿದ್ದಾರೆ.
“ಕೆಲವು ಸಚಿವರು ಸಿಎಂ ಅವರೊಂದಿಗೆ ಓಡಾಡಿಕೊಂಡು ಇರುತ್ತಾರೆ. ಸಚಿವರು ಜಿಲ್ಲೆಗಳಿಗೆ ಹೋಗಿ ಕೆಲಸ ಮಾಡಲಿಲ್ಲ ಎಂದಾದಲ್ಲಿ ಮುಂದಿನ ದಿನಗಳಲ್ಲಿ ಗಂಭೀರವಾದ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.
ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಯತ್ನಾಳ್ ಅವರಿಗೆ ಗೌಪ್ಯ ಮಾಹಿತಿ ಬಂದಿರಬಹುದು. ರಾಜ್ಯಕ್ಕೆ ತೆರಳಿದ ಬಳಿಕ ಅವರ ಜೊತೆ ನಾನು ಮಾತುಕತೆ ನಡೆಸುತ್ತೇನೆ” ಎಂದಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…