Featured

ಡಿ. 14 ರಿಂದ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲು ಸಂಚಾರ ರದ್ದು – vishwanews24

ಡಿ. 14 ರಿಂದ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲು ಸಂಚಾರ ರದ್ದು

ಮಂಗಳೂರು: ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲು ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಿನ್ಸಿಪಲ್ ಚೀಫ್ ಮ್ಯಾನೇಜರ್ (ಕಾರ್ಯಾಚರಣೆ) ಅವರು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ನೈಋತ್ಯ ರೈಲ್ವೆಯು ಹಾಸನದ ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ನಲ್ಲಿ ವಿವಿಧ ಕಾಮಗಾರಿಗಳ ಹಿನ್ನಲೆ ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ವಿವಿಧ ದಿನಾಂಕಗಳಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಿದೆ ಎಂದು ತಿಳಿಸಿದೆ.

ರೈಲು ಸಂಖ್ಯೆ 16511 ಬೆಂಗಳೂರು- ಮಂಗಳೂರು- ಕಣ್ಣೂರು ಮತ್ತು ರೈಲು ಸಂಖ್ಯೆ 16595 ಬೆಂಗಳೂರು- ಕಾರವಾರ ಪಂಚಗಂಗಾ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಡಿಸೆಂಬರ್ 16 ರಿಂದ ಡಿಸೆಂಬರ್ 20 ತನಕ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 16512 ಕಣ್ಣೂರು- ಮಂಗಳೂರು- ಬೆಂಗಳೂರು ಮತ್ತು ರೈಲು ಸಂಖ್ಯೆ 16596 ಕಾರವಾರ – ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್‌ನ್ನು ಡಿಸೆಂಬರ್ 17 ರಿಂದ ಡಿಸೆಂಬರ್ 21 ತನಕ ರದ್ದುಗೊಳಿಸಲಾಗಿದೆ. ವಾರದಲ್ಲಿ ಮೂರು ದಿನ ಸಂಚರಿಸುವ ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್‌ಪ್ರೆಸ್‌ನ್ನು ಡಿಸೆಂಬರ್ 14, 17, 19 ಮತ್ತು 21 ರಂದು ರದ್ದುಗೊಳಿಸಲಾಗಿದೆ.

ಮಂಗಳೂರು ಜಂಕ್ಷನ್- ಯಶವಂತಪುರ ಗೋಮಟೇಶ್ವರ ಎಕ್ಸ್‌ಪ್ರೆಸ್ 16576ನ್ನು ಡಿಸೆಂಬರ್ 15, 18, 20 ಮತ್ತು 22 ರಂದು ರದ್ದುಗೊಳಿಸಲಾಗಿದೆ. ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ನಂಬರ್ 16515 ಪ್ರಯಾಣವನ್ನು ಡಿಸೆಂಬರ್ 13, 15,18,20 ಮತ್ತು 22 ರಂದು ರದ್ದುಪಡಿಸಲಾಗಿದೆ.

ವಾರದಲ್ಲಿ ಮೂರು ದಿನ ಸಂಚರಿಸುವ ಕಾರವಾರ- ಯಶವಂತಪುರ ನಂಬರ್ 16516 ನಂಬರ್ ರೈಲು ಸೇವೆಯನ್ನು ಡಿಸೆಂಬರ್ 14, 16, 19, 21 ಮತ್ತು 23 ರಂದು ರದ್ದುಗೊಳಿಸಲಾಗಿದೆ. ಡಿಸೆಂಬರ್ 16 ಮತ್ತು 17 ರಂದು ಯಶವಂತಪುರ- ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲ್(16539/ 16540) ಓಡಾಟವನ್ನು ಕ್ರಮವಾಗಿ ರದ್ದುಪಡಿಸಲಾಗಿದೆ. ಲಭ್ಯ ರೈಲು ಮಾರ್ಗ ಈ ಅವಧಿಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು- ಮುರ್ಡೇಶ್ವರ-ಬೆಂಗಳೂರು (ರೈಲು ಸಂಖ್ಯೆ. 16585/ 586 ) ರಾಜಧಾನಿಯನ್ನು ಕರಾವಳಿಯೊಂದಿಗೆ ಸಂಪರ್ಕಿಸುವ ಏಕೈಕ ರೈಲು ಆಗಿರುತ್ತದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 day ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago