Featured

ಡಿ.21ರಂದು ಸಮೀಪದಲ್ಲಿ ಗೋಚರಿಸಲಿವೆ ಗುರು ಹಾಗೂ ಶನಿ ಗ್ರಹ  – Vishwanews24

ಡಿ.21ರಂದು ಸಮೀಪದಲ್ಲಿ ಗೋಚರಿಸಲಿವೆ ಗುರು ಹಾಗೂ ಶನಿ ಗ್ರಹ  – Vishwanews24

ಉಡುಪಿ: ಸೌರವ್ಯೂಹದ ಎರಡು ಬೃಹತ್ ಗ್ರಹಗಳಾದ ಗುರು ಮತ್ತು ಶನಿ ಡಿಸೆಂಬರ್‌ ತಿಂಗಳಿನಲ್ಲಿ ಬಹಳ ಸಮೀಪವಿದ್ದಂತೆ ಕಾಣುತ್ತವೆ. ಸಂಜೆಯ ಪಶ್ಚಿಮ ಆಕಾಶದಲ್ಲಿ ಜೋಡಿ ಗ್ರಹಗಳು ಆಕರ್ಷಣೀಯವಾಗಿ ಕಾಣುತ್ತವೆ ಎಂದು ಪೂರ್ಣಪ್ರಜ್ಞ ಅಮೆಚೂರ್‌ ಆಸ್ಟ್ರೋನಾಮರ್ಸ್‌ ಕ್ಲಬ್‌ನ ಸಂಸ್ಥಾಪಕ ಸಹ ಸಂಚಾಲಕ ಡಾ.ಎ.ಪಿ.ಭಟ್ ತಿಳಿಸಿದ್ದಾರೆ.

ಗುರುಗ್ರಹವು ಸೂರ್ಯನನ್ನು ಒಮ್ಮೆ ಸುತ್ತಲು 11.9 ವರ್ಷ ಬೇಕಾಗುತ್ತದೆ. ಶನಿಗ್ರಹಕ್ಕೆ 29.5 ವರ್ಷಗಳು ಬೇಕಾಗುತ್ತದೆ. ಪ್ರತಿ 20 ವರ್ಷಕ್ಕೊಮ್ಮೆ ಈ ಎರಡು ಗ್ರಹಗಳು ಸಮೀಪದಲ್ಲಿ ಕಾಣುತ್ತವೆಯಾದರೂ ಈ ಸಲ ಹೆಚ್ಚು ಸಮೀಪದಲ್ಲಿ ಕಾಣುತ್ತಿವೆ. ಡಿಸೆಂಬರ್‌ನಲ್ಲಿ ಎರಡೂ ಗ್ರಹಗಳು ಪ್ರತಿದಿನ ಹತ್ತಿರಕ್ಕೆ ಬಂದು 21ರಂದು ಕನಿಷ್ಠ ಅಂತರಕ್ಕೆ ಬರಲಿವೆ.

ಹಿಂದೆ 1,226, ಮಾರ್ಚ್ 4ರಂದು ಗುರು ಹಾಗೂ ಶನಿ ತೀರಾ ಹತ್ತಿರಕ್ಕೆ ಬಂದಿದ್ದವರು. ಮುಂದೆ, 2,080 ಹಾಗೂ 2,400ರಲ್ಲಿ ಈ ಗ್ರಹಮಗಳು ಮತ್ತೆ ಸಮೀಪದಲ್ಲಿ ಕಾಣಲಿವೆ. ಇದೊಂದು ಅಪರೂಪದ ಆಕಾಶದ ವಿದ್ಯಮಾನ ಎಂದು ಎ.ಪಿ.ಭಟ್ ತಿಳಿಸಿದ್ದಾರೆ.

ಗುರು ಗ್ರಹವು ಭೂಮಿಯಿಂದ ಸುಮಾರು 89 ಕೋಟಿ ಕಿ.ಮೀ. ದೂರದಲ್ಲಿದೆ. ಶನಿ ಗ್ರಹವು ಗುರು ಗ್ರಹದಿಂದ ಅಷ್ಟೇ ಆಳದಲ್ಲಿದೆ. ಅಂದರೆ ಭೂಮಿಯಿಂದ ಸುಮಾರು 159 ಕೋಟಿ ಕಿ.ಮೀ. ದೂರದಲ್ಲಿದೆ. ಆದರೂ, ಭೂಮಿಯಿಂದ ನೋಡುವಾಗ ಸಮೀಪ ಬಂದಂತೆ ಭಾಸವಾಗುತ್ತವೆ. ಇದೂ ಆಕಾಶದಲ್ಲಿ ನಡೆಯುವ ಚಮತ್ಕಾರ. ಖಗೋಳ ಆಸಕ್ತರು ಇದನ್ನು ನೋಡಿ ಆನಂದಿಸಬೇಕು ಎನ್ನುತ್ತಾರೆ ಎ.ಪಿ.ಭಟ್ ಅವರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago