Featured

ಡಿ. 5ರಂದು ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ -Vishwanews24

ಡಿ. 5ರಂದು ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ -Vishwanews24

ಕಾರ್ಕಳ : ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಡಿ. 5ರಂದು ಜರಗಲಿದೆ. ಬೆಳಿಗ್ಗೆ 7 ಗಂಟೆಗೆ ಪ್ರಾರ್ಥನೆ, ಬಳಿಕ ಶ್ರೀ ಶ್ರೀನಿವಾಸ ಹಾಗೂ ಶ್ರೀ ವೆಂಕಟರಮಣ ದೇವರು ವನಕ್ಕೆ ಹೊರಡುವ ಉತ್ಸವ ನಡೆಯಲಿದೆ.

ಸರಕಾರದ ಕೋವಿಡ್‌ ನಿಯಮ ಉಲ್ಲಂಘನೆ ಆಗದಂತೆ ಕಾರ್ಯಕ್ರಮ ನಡೆಯಲಿದೆ. ಫಲ ಕಾಣಿಕೆ ಸಮರ್ಪಿಸುವವರು ಪ್ರಾಥಃಕಾಲ 7. ರೊಳಗೆ ಸಮರ್ಪಿಸಬೇಕು ಮತ್ತು ಉತ್ಸವ ಆರಂಭವಾಗಿ ಒಳಗಿನ ಪ್ರದಕ್ಷಿಣೆಯಲ್ಲಿ ಉರುಳು ಸೇವೆಗೆ ಅವಕಾಶವಿಲ್ಲ. ಉತ್ಸವದ ಕಾಲದಲ್ಲಿ ದೇವರಿಗೆ ಆರತಿ ಸಮರ್ಪಿಸಲು ಅವಕಾಶವಿರುವುದಿಲ್ಲ (ಇದರ ಬಾಪ್ತು ಬತ್ತಿ, ಎಣ್ಣೆಯನ್ನು ದೇವಳಕ್ಕೆ ಸಮರ್ಪಿಸಬಹುದು).

ಪೂರ್ವಾಹ್ನರಿಂದ ಸಯಂಕಾಲದವರೆಗೆ ದೇವರ ದರ್ಶನ ಮತ್ತು ವನಭೋಜನ ಪ್ರಸಾದ ಪಡೆಯುವುದು. ಸಾಯಂಕಾಲ ವನದಿಂದ ಮಣ್ಣಗೋಪುರಕ್ಕೆ ಹೊರಡುವುದು, ಮಣ್ಣಗೋಪುರದಲ್ಲಿ ದೇವರಿಗೆ ಪೂಜೆ (ದರ್ಶನದ ಯಾ ಹಣ್ಣ ಕಾಯಿ ಸಮರ್ಪಿಸಲು ಯಾರಿಗೂ ಅವಕಾಶವಿಲ್ಲ) ಸಾಯಂಕಾಲ ರಾಜೋಪಚಾರ ಪೂಜೆಯ ಬಳಿಕ ಮಣ್ಣ ಗೋಪುರದಿಂದ ದೇವಳಕ್ಕೆ ಉತ್ಸವ ಹೊರಡುವುದು. ಆಯಾ ಗುರ್ಜಿ ಸೇವೆಯ ಸ್ಥಾನದಲ್ಲಿ ಕೇವಲ ಗುರ್ಜಿಸೇವಾದಾರರಿಗೆ ಪ್ರಸಾದ. ದೇವಳಕ್ಕೆ ತಲುಪಿದ ಬಳಿಕ ಆವರಣದೊಳಗೆ ಆಗುವ ಎಲ್ಲ ಕಾರ್ಯಕ್ರಮಗಳು ಯಥಾ ಪ್ರಕಾರ ಜರುಗುವುದು ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

14 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago