Featured

ಡಿ. 6 ಮತ್ತು 7ರಂದು ಉಡುಪಿಯಲ್ಲಿ “ಕರಾವಳಿ ಭಜನಾ ಸಮಾವೇಶ” – vishwanews24

ಡಿ. 6 ಮತ್ತು 7ರಂದು ಉಡುಪಿಯಲ್ಲಿ “ಕರಾವಳಿ ಭಜನಾ ಸಮಾವೇಶ”

ಉಡುಪಿ: ಸಂತಕವಿ ಕನಕದಾಸ ಮತ್ತು‌ ತತ್ವಪದಕಾರರ ಅಧ್ಯಯನ ಕೇಂದ್ರ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಉಡುಪಿ ಮತ್ತು ರಾಷ್ಟ್ರ ಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ ಇದರ ಸಹಯೋಗದಲ್ಲಿ ‘ಕರಾವಳಿ ಭಜನಾ ಸಮಾವೇಶ’ ಎಂಬ ಎರಡು ದಿನಗಳ ಸಮಾವೇಶವನ್ನು ಡಿ. 6 ಮತ್ತು 7ರಂದು ಉಡುಪಿ ಎಂಜಿಎಂ ಕಾಲೇಜು ಆವರಣದ ಟಿ. ಮೋಹನದಾಸ್ ಪೈ ಅಮೃತ ಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂತಕವಿ ಕನಕದಾಸ ಮತ್ತು‌ ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಸಂಚಾಲಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ತಿಳಿಸಿದರು.

ಈ‌ ಕುರಿತು ಸುದ್ದಿಗೋಷ್ಠಿಯಲ್ಲಿ ನೀಡಿದ ಅವರು, ಡಿ.6ರಂದು ಬೆಳಿಗ್ಗೆ 10ಗಂಟೆಗೆ ಹಿರಿಯ ವಿದ್ವಾಂಸ ಡಾ. ಬಿ. ಎ ವಿವೇಕ ರೈ ಸಮಾವೇಶವನ್ನು‌ ಉದ್ಘಾಟಿಸಲಿದ್ದಾರೆ. ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ ತ ಚಿಕ್ಕಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಹೆ ಸಹಕುಲಪತಿ ಡಾ. ನಾರಾಯಣ ಸಭಾಹಿತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಸಮಾವೇಶದಲ್ಲಿ ಮಹಾಲಕ್ಷ್ಮೀ ಮೊಗವೀರ ಭಜನಾ ಮಂಡಳಿ, ರಾಗ ರಂಜಿನಿ ತಂಡ, ಶ್ರೀ ಮಹಾಗಣಪತಿ ಭಜನಾ ಮಂಡಳಿ, ಜಿ.ಎಸ್.ಬಿ ಮಹಿಳಾ ಮಂಡಳಿ, ಶ್ರೀ ಮಾರಿಕಾಂಬ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಯಕ್ಷಿ ಕಲ್ಲುಕುಟಿಗ ಭಜನಾ ಮಂಡಳಿ, ರಂಗಚಿನ್ನಾರಿಯ ಸ್ಮರಚಿನ್ನಾರಿ ಭಜನಾ ಮಂಡಳಿ, ಸರ್ವೇಶ್ವರೀ ಭಜನಾ ಮಂಡಳಿ, ಬಾಲವಿಕಾಸ ಭಜನಾ ಮಂಡಳಿ, ಶ್ರೀ ವೀರಭದ್ರ ಗುರು ಮಾಚಿದೇವ ಭಜನಾ ಮಂಡಳಿ, ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶ್ರೀ ಬಾಲಾಜಿ ಕಲಾ ಭಜನಾ ಮಂಡಳಿ ಮತ್ತು ಶ್ರೀ ಬ್ರಹ್ಮಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ತಂಡ ಸೇರಿ ಒಟ್ಟು 13 ಭಜನಾ ತಂಡಗಳು ಭಜನೆಗಳನ್ನು ಹಾಡಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತ ಅಧಿಕಾರಿ ಡಾ. ಜಗದೀಶ್ ಶೆಟ್ಟಿ, ಭಜನಾ ಸಮಾವೇಶದ ಸಂಯೋಜಕ ರವಿರಾಜ್ ಎಚ್‌.ಪಿ., ಸಹ ಸಂಶೋಧಕ ಅರುಣ್ ಕುಮಾರ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago