Featured

ಡಿ.7ರಂದು ಉಡುಪಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್  ; ಶ್ರೀ ಕೃಷ್ಣಮಠದ ಗೀತೋತ್ಸವ ಸಮಾರಂಭದಲ್ಲಿ ಭಾಗಿ – vishwanews24

ಉಡುಪಿ: ಡಿ.7 ರಂದು ಶ್ರೀ ಕೃಷ್ಣಮಠದ ಗೀತೋತ್ಸವ ಸಮಾರೋಪಕ್ಕೆ ಪವನ್‌ ಕಲ್ಯಾಣ್‌

ಉಡುಪಿ: ಡಿಸೆಂಬರ್‌ 7 ರಂದು ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಪುತ್ತಿಗೆ ಮಠ ಆಶ್ರಯದಲ್ಲಿ ಕೃಷ್ಣಮಠ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭ ಡಿ.7ರಂದು ನಡೆಯಲಿದೆ.

ಅಪರಾಹ್ನ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅಭ್ಯಾಗತರಾಗಿ ಆಂಧ್ರಪ್ರದೇಶ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಪರಿಸರ, ಅರಣ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಪವನ್ ಕಲ್ಯಾಣ್ ಆಗಮಿಸುವರು ಎಂದು ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.
ನ.8ರಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಂದ ಉದ್ಘಾಟನಗೊಂಡ ಬೃಹತ್ ಗೀತೋತ್ಸವ ಒಂದು ತಿಂಗಳ ಪರ್ಯಂತ ವಿವಿಧ ಕಾರ್ಯಕ್ರ‌ಮಗಳೊಂದಿಗೆ ನಡೆದಿದ್ದು, ವಿಶ್ವ ದಾಖಲೆಗೆ ಪಾತ್ರವಾದ ಲಕ್ಷಕಂಠ ಗೀತಾ ಪಾರಾಯಣ ‌ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿರುವುದನ್ನು ಸ್ಮರಿಸಬಹುದು ಎಂದು ಮಠದ ಪ್ರಕಟನೆ ತಿಳಿಸಿದೆ.
Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

1 hour ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

1 hour ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

2 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago