ಡಿ. 8 ಭಾರತ್ ಬಂದ್ : ಉಡುಪಿಯಲ್ಲಿ ಬೆಂಬಲವಿಲ್ಲ : ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ -Vishwanews24

Featured, ಉಡುಪಿ

 ಡಿ. 8 ಭಾರತ್ ಬಂದ್ : ಉಡುಪಿಯಲ್ಲಿ ಬೆಂಬಲವಿಲ್ಲ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ

ಉಡುಪಿ: ಡಿ. 8 ರಂದು ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಕನ್ನಡ ಪರ ಸಂಘಟನೆಗಳು ಈ ಭಾರತ್ ಬಂದ್‌ ಗೆ ಬೆಂಬಲ ನೀಡಲ್ಲ ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಪ್ರವೀಣ್ ಶೆಟ್ಟಿ ಕೊರೋನಾ ಸಂಕಟದಿಂದ ಜನತೆ ಅತೀವ ತೊಂದರೆಯಲ್ಲಿದ್ದಾರೆ. ರಾಜ್ಯದ ವ್ಯಾಪಾರಿಗಳು ನಷ್ಟ ಅನುಭವಿಸುತ್ತಿದ್ದಾರೆ.

ಆರ್ಥಿಕ ಮುಗ್ಗಟ್ಟಿನಿಂದ ಸಾಕಷ್ಟು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಾರು, ಆಟೋ ಚಾಲಕರು ಬೀದಿಗೆ ಬಂದಿದ್ದಾರೆ. ಶನಿವಾರ ಕನ್ನಡಪರ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ಕೊಟ್ಟಿದ್ದರು.

ಜನರು ಸಮಸ್ಯೆಯಲ್ಲಿರುವಾಗ ಮತ್ತೆ ಮತ್ತೆ ಬಂದ್ ಗೆ ಕರೆ ನೀಡುವುದು ಸರಿಯಲ್ಲ. ರೈತರ ಹೋರಾಟಕ್ಕೆ ಸದಾಕಾಲ ನಮ್ಮ ಬೆಂಬಲವಿದೆ. ಯಾವುದೇ ಕಾರಣಕ್ಕೂ ಡಿ. 8 ರ ಭಾರತ್ ಬಂದ್ ಗೆ ಬೆಂಬಲವಿಲ್ಲ ಎಂದು ಹೇಳಿದ್ದಾರೆ.