Featured

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು : ಸಚಿವ ಕೆ.ಜೆ ಜಾರ್ಜ್ – vishwanews24

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು : ಸಚಿವ ಕೆ.ಜೆ ಜಾರ್ಜ್

  ಉಡುಪಿ : ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್ ಗೆ ಇಂದು ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬ್ಲೂ ಫ್ಲ್ಯಾಗ್ ಬೀಚ್ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಸೇರಿದಂತೆ ಮತ್ತಿತರ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

 ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪಡುಬಿದ್ರಿಯ ಬ್ಲೂ ಫ್ಲಾö್ಯಗ್ ಬೀಚ್ಗೆ ಪ್ರವಾಸಿಗರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ವಾರದ ಕಡೆಯ ದಿನದಲ್ಲಿ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು

 ಸಾಮಾನ್ಯವಾಗಿ ಕರಾವಳಿ ಭಾಗದ ವಾತಾವರಣದ ತೇವಾಂಶದಲ್ಲಿ ಉಪ್ಪಿನ ಅಂಶವಿರುವ ಹಿನ್ನೆಲೆ, ವಿದ್ಯುತ್ ತಂತಿಗಳು ತುಕ್ಕು ಹಿಡಿದು ತುಂಡಾಗುತ್ತಿದ್ದು, ಬೀಚ್ನಲ್ಲಿ ನಿರಂತರ ವಿದ್ಯುತಚ್ಛಕ್ತಿ ಸರಬರಾಜಿಗೆ ತೊಂದರೆ ಉಂಟಾಗುತ್ತಿದೆ. ಬ್ಲೂ ಫ್ಲಾö್ಯಗ್ ಬೀಚ್ ರಸ್ತೆಯಲ್ಲಿರುವ ವಿದ್ಯುತ್ ತಂತಿಗಳಿಗೆ ಇನ್ಸುಲೇಟೆಡ್ ಕೇಬಲ್ ಅಳವಡಿಸಲು ಇಂಧನ ಇಲಾಖೆಯ ಮೂಲಕ ತಕ್ಷಣ ರೂ.50 ಲಕ್ಷ ಬಿಡುಗಡೆಗೊಳಿಸುತ್ತಿದ್ದು, ವಾರದೊಳಗೆ ಅಂದಾಜು ಪಟ್ಟಿ ತಯಾರಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು

ರಾಷ್ಟ್ರೀಯ ಹೆದ್ದಾರಿ 66 ರಿಂದ ಪಡುಬಿದ್ರಿ ಬೀಚ್ಗೆ ಸಂಪರ್ಕ ಕಲ್ಪಿಸುವ ಸುಮಾರು ಮೂರು ಕಿ.ಮೀ. ರಸ್ತೆಯ ವಿಸ್ತರಣೆ, ಕಾಂಕ್ರೀಟ್ ಕಾಮಗಾರಿ ಹಾಗೂ ಎಂಡ್ಪಾಯಿAಟ್ ರಸ್ತೆಯ ಕಾಮಿನಿ ಹೊಳೆಯ ಹೂಳೆತ್ತುವಿಕೆ ಕಾಮಗಾರಿಗೆ ಸಂಬAಧಿಸಿ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರ ಜಂಟಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೀಚ್ಗೆ ಹೊಂದಿಕೊAಡಿರುವ ಸರ್ಕಾರಿ ಜಾಗವನ್ನು ಕೆಲವು ಖಾಸಗಿಯವರು ಒತ್ತುವರಿ ಮಾಡಿರುವ ಬಗ್ಗೆ ಮೌಖಿಕ ದೂರುಗಳು ಕೇಳಿ ಬರುತ್ತಿವೆ. ಬಗ್ಗೆ ಕಂದಾಯ ಇಲಾಖಾ ಅಧಿಕಾರಿಗಳು ಪರಿಶೀಲಿಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಬೀಚ್ಗೆ ಪ್ರತಿದಿನ ಒಂದರಿ0 ಎರಡು ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು, ಪ್ರವಾಸಿಗರ  ವಾಹನ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಅವಶ್ಯಕತೆ ಇದೆ. ಹಿನ್ನೆಲೆಯಲ್ಲಿ ಬೀಚ್ ಸಮೀಪವಿರುವ ಸರಕಾರಿ ಅಥವಾ ಖಾಸಗಿ ಜಾಗ ಪಡೆದು ವಾಹನ ನಿಲುಗಡೆಗೆ ಸೂಕ್ತ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು

ಕಡಲ್ಕೊರೆತ ಸಮಸ್ಯೆಯಿಂದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ. ಕಡಲ್ಕೊರೆತ ನಿಯಂತ್ರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬ0ಧಿಸಿದ ವಿಷಯಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಂದರ್ಭ ಹೆಜಮಾಡಿ ಹಾಗೂ ಪಡುಬಿದ್ರಿಯ ಮಧ್ಯದ ಮುಟ್ಟಳಿವೆಗೆ ಬ್ರೇಕ್ ವಾಟರ್ ನಿರ್ಮಾಣ, ನಾದರಸ್ತಿಯಲ್ಲಿರುವ ಬೀಚ್ ಸಂಪರ್ಕದ ಸೇತುವೆಗೆ ಕಾಯಕಲ್ಪ, ಪಡುಬಿದ್ರಿ ಬ್ಲೂ ಫ್ಲಾö್ಯಗ್ ಬೀಚ್ ಬಳಿ ಬಾಕಿ ಇರುವ ಒಂದು ಕಿ.ಮೀ ಸಮುದ್ರ ತಡೆಗೋಡೆ, ಎಂಡ್ಪಾಯಿAಟ್ ದ್ವೀಪಕ್ಕೆ ತೂಗು ಸೇತುವೆ ನಿರ್ಮಿಸುವ ಕುರಿತು ಸಚಿವರಿಗೆ ಮನವಿ ಸಲ್ಲಿಸಲಾಯಿತು. ಬಗ್ಗೆ ಸಂಬAಧಪಟ್ಟ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ರಾಜ್ಯ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಮ್..ಗಫೂರ್ ಸಚಿವರಿಗೆ ಬೀಚ್ ವಸ್ತುಸ್ಥಿತಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಸಚಿವರ ಗಮನಕ್ಕೆ ತಂದರು

 ಮೆಸ್ಕಾಂ ಚೇರ್ಮೆನ್ ಹರೀಶ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಾಮ್ಪ್ರಸಾತ್ ಮನೋಹರ್, ಎಡಿಸಿ ಅಬೀದ್ ಗಧ್ಯಾಳ, ಮೆಸ್ಕಾಂ ಎಮ್.ಡಿ ಹರೀಶ್, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯಾ, ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಮ್, ಬ್ಲೂ ಫ್ಲ್ಯಾಗ್ ಬೀಚ್ ಮ್ಯಾನೇಜರ್ ವಿಜಯ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಮೂಲ್ಕಿ : ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ  ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ – VISHWANEWS24

ಮೂಲ್ಕಿ : ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ  ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ ಮೂಲ್ಕಿ : ಒಂಬತ್ತು…

1 hour ago

ಉಡುಪಿ:  ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ – vishwanews24

ಉಡುಪಿ:  ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ   ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ…

2 hours ago

ಉಡುಪಿ :  ತ್ರಾಸಿ – ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ : ಸಚಿವ ಕೆ.ಜೆ ಜಾರ್ಜ್ – vishwanews24

 ಉಡುಪಿ :  ತ್ರಾಸಿ - ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ : ಸಚಿವ…

2 hours ago

ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ – vishwanews24

ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…

3 hours ago

ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರೆ ಕಾನೂನು ಕ್ರಮ : ಸಿಎಂ ವಿಜಯ್ ಎಚ್ಚರಿಕೆ – vishwanews24

ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರೆ ಕಾನೂನು ಕ್ರಮ : ಸಿಎಂ ಜೋಸೆಫ್ ವಿಜಯ್ ಎಚ್ಚರಿಕೆ ಚೆನ್ನೈ: ಮಹಿಳೆಯರ ವಿರುದ್ಧ…

3 hours ago

ಪಡುಬಿದ್ರಿ : ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ – vishwanews24

ಪಡುಬಿದ್ರಿ :  ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ ಉಡುಪಿ: ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ…

3 hours ago