Featured

ಡೆಂಗ್ಯೂ ಫೀವರ್ ಗಳಿಗೆ ದಾಖಲಾದ ರೋಗಿಗಳಿಗೂ ಉಚಿತ ಚಿಕಿತ್ಸೆ ಕೊಡಬೇಕು : ಡಾ. ಮಂಜುನಾಥ್ – vishwanews24

ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ..

ಏನೇನೋ ಫ್ರೀ ಕೊಡುವ ಬದಲು ಸ್ಲಂ, ವಠಾರಗಳಲ್ಲಿ ವಾಸಿಸುವವರಿಗೆ ಸೊಳ್ಳೆ ಪರದೆ ಉಚಿತ ನೀಡಿ..

ಬೆಂಗಳೂರು: ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಹೀಗಾಗಿ ಏನೇನೋ ಫ್ರೀ ಕೊಡುವ ಬದಲು ಸ್ಲಂ, ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನು ಉಚಿತವಾಗಿ ಕೊಡಬೇಕು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಮಂಜುನಾಥ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಗೌಡ ಜೊತೆ ಜಂಟಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಇಲ್ಲ. ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ. ಕೋವಿಡ್ ಅನ್ನು ಪ್ಯಾಂಡಮಿಕ್ ಕಾಯಿಲೆ ಎಂದೆವು. ಇದು ಎಂಡಮೆಕ್ ಕಾಯಿಲೆ. ಕೋವಿಡ್ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು. ಮೆಡಿಕಲ್ ಎಮರ್ಜೆನ್ಸಿ ಅಂತಾ ಘೋಷಣೆ ಮಾಡಬೇಕು ಎಂದು ಹೇಳಿದರು.

ರೋಗ ಪತ್ತೆಗೆ ಹೆಚ್ಚು ದರ ತೆಗೆದುಕೊಳ್ಳುವ ಲ್ಯಾಬ್ ಗಳ ಬಾಗಿಲು ಮುಚ್ಚಿಸಬೇಕು. ಸೊಳ್ಳೆ ನಿಯಂತ್ರಣ ಮಾಡಬೇಕು. ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಕೆಲಸ ಮಾಡಬೇಕು. ಇದನ್ನು ನಿಯಂತ್ರಣ ಮಾಡಲು ಟಾಸ್ಕ್ ಫೋರ್ಸ್ ಮಾಡಬೇಕು. ಬೇಸಿಗೆ ಕಾಲದಲ್ಲೇ ನಾವು ಮಳೆಗಾಲದ ಸಮಸ್ಯೆಗಳಿಗೆ ಪರಿಹಾರ ಮಾಡಬೇಕು. ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ. ನಾವು ಏನೇನೋ ಫ್ರೀ ಕೊಡ್ತೀವಿ. ಆದರ ಬದಲಾಗಿ ಸ್ಲಂಗಳಲ್ಲಿ, ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆ ಉಚಿತವಾಗಿ ಕೊಡಬೇಕು. ಇದು ನಿಮಗೆ ಹಾಸ್ಯ ಅನಿಸಬಹುದು, ಆದರೆ ಇದು ಸತ್ಯ. ಕೋವಿಡ್ ಸಂಧರ್ಭದಲ್ಲಿ ಉಚಿತ ಚಿಕಿತ್ಸೆ ಕೊಟ್ಟೆವು. ಡೆಂಗ್ಯೂ ಫೀವರ್ ಗಳಿಗೆ ದಾಖಲಾದ ರೋಗಿಗಳಿಗೂ ಉಚಿತ ಚಿಕಿತ್ಸೆ ಕೊಡಬೇಕು. ಖಾಸಗಿ ಆಸ್ಪತ್ರೆ ಗಳಲ್ಲಿ ದಾಖಲಾದ ರೋಗಿಗಳಿಗೂ ಸರ್ಕಾರ ದರ ನಿಗದಿ ಮಾಡಿ, ಸರ್ಕಾರವೇ ಭರಿಸಬೇಕು ಎಂದರು.

ವಾರ್ ರೂಂ ಆಥವಾ ಕಂಟ್ರೋಲ್ ರೂಂ ಆಗಲಿ ಇದಕ್ಕೆ ಮಾಡಬೇಕು. ಮಾನಿಟರ್ ಮಾಡಬೇಕು. ಡೆಂಗ್ಯೂ ಹರಡುವಿಕೆ ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 hour ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago